Advertisement

‘ತಮಾಷೆಗಾಗಿ ಹೇಳಿದ್ದು’ಎಂದು ಈಶ್ವರಪ್ಪ ಹೇಳಿದ್ದಾರಲ್ಲ : ಯಡಿಯೂರಪ್ಪ ಸ್ಪಷ್ಟನೆ

04:09 PM Nov 29, 2021 | Team Udayavani |

ದಾವಣಗೆರೆ: ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ತಮಾಷೆಗಾಗಿ ಹೇಳಿದ್ದಾಗಿ ಈಶ್ವರಪ್ಪ ಅವರೇ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿಯನ್ನ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.

ಈಗ ವಿಧಾನ ಪರಿಷತ್ ನ 25 ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನದಲ್ಲಿ ಸ್ಪರ್ಧಿಸಿದೆ. ಖಂಡಿತವಾಗಿಯೂ 15ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಪರಿಷತ್ತಿನ ಲ್ಲಿ ಖಂಡಿತವಾಗಿ ಬಹುಮತ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕ ಎಸ್.ಆರ್. ಪಾಟೀಲ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next