Advertisement

Karnataka Election ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಗೆ ಬೆಂಕಿಯಿಟ್ಟ ಈಶ್ವರಪ್ಪ

11:14 AM May 04, 2023 | Team Udayavani |

ಕಲಬುರಗಿ: ಬಜರಂಗದಳ ನಿಷೇಧವು ಸೇರಿದಂತೆ ಹಲವು ಗ್ಯಾರಂಟಿಗಳಿರುವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಜೆಪಿ ಹಿರಿಯ, ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಬಿಜೆಪಿ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಬೆಂಕಿ ಇಟ್ಟು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

Advertisement

ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎನ್ನುವ ಪ್ರಣಾಳಿಕೆಯೇ ದೇಶದ್ರೋಹದ ಪ್ರತೀಕ ಎಂದು ಸಿಡಿಮಿಡಿಗೊಂಡ ಈಶ್ವರಪ್ಪ, ಬಜರಂಗದಳ ದಳ ಬ್ಯಾನ್ ಮಾಡುತ್ತೇವೆ ಎಂದಿದ್ದಕ್ಕೆ ಹಿಂದೂಗಳಿಗೆ ನೋವಾಗಿದೆ ಎಂದು ಹರಿಹಾಯ್ದರು.

ಕಾಂಗ್ರೆಸ್‌ನ ಮನಸ್ಥಿತಿ ರಾಜ್ಯದ ಜನರಿಗೆ ಗೋತ್ತಾಗಿದೆ. ಎಲ್ಲಾ ಮುಸ್ಲಿಂಮರು ಒಂದೇ ಥರವಲ್ಲ. ಕೆಲ ಮುಸ್ಲಿಮರು ಕಾಂಗ್ರೆಸ್‌ನ ವಿರುದ್ಧವಾಗಿದ್ದಾರೆ. ಕೆಲವರು ಬಿಜೆಪಿ ಪರವಾಗಿಯೂ ಇದ್ದಾರೆ. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲಿಗ್‌ನ ಪ್ರಣಾಳಿಕೆ/ಮಹಮದ್ ಅಲಿ ಜಿನ್ನಾನ ಪ್ರಣಾಳಿಕೆ ಎಂದು ದೂರಿದರು.

ಇದನ್ನೂ ಓದಿ:RCB FAN: ಮನಸ್ಸು ಮಾತ್ರವಲ್ಲ ಈತನ ಬೈಕ್‌ ನಲ್ಲೂ ಆರ್‌ ಸಿಬಿ ಅಭಿಮಾನದೇ ಹವಾ.. ವಿಡಿಯೋ

ಬಜರಂಗದಳ ಬ್ಯಾನ್ ಮಾಡಿ ಮುಸ್ಲಿಮರ ತುಷ್ಟಿಕರಣ ಮಾಡಲು ಕಾಂಗ್ರೆಸ್‌ ಹೊರಟಿದೆ. ಎಲ್ಲಾ ರಾಷ್ಟ್ರಭಕ್ತ ನಾಗರಿಕರು ರಾಷ್ಟ್ರದ್ರೋಹಿ ಪ್ರಣಾಳಿಕೆ ಬಹಿಷ್ಕರಿಸಲು ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next