Advertisement

ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡಬೇಕಿತ್ತು: ಸಿ.ಟಿ ರವಿ

01:14 PM Feb 04, 2023 | Team Udayavani |

ಚಿಕ್ಕಮಗಳೂರು: ಕೆ.ಎಸ್. ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರ ಜಾಗದಲ್ಲಿ ನಾನಿದ್ದರೂ ಅದನ್ನೇ ಹೇಳುತ್ತಿದ್ದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಪಕ್ಷ ಕಟ್ಟಿದ ಹಿರಿಯ ನಾಯಕರಲ್ಲಿ ಒಬ್ಬರು. ಅಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು ಸಾಬೀತಾಗಿದೆ. ಈಗ ಅವರು ಮಂತ್ರಿ ಸ್ಥಾನ ಕೇಳುವುದು ತಪ್ಪಲ್ಲ, ಅವರಿಗೆ ಕೊಡಬೇಕಿತ್ತು ಎಂದರು.

ಇದನ್ನೂ ಓದಿ:ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

ಈಶ್ವರಪ್ಪನವರ ಗೌರವಕ್ಕೆ ಯಾವುದೇ ಕುಂದು ಉಂಟಾಗಲ್ಲ. ಪಕ್ಷದ ಕೋರ್ ಕಮಿಟಿ ಸಭೆಯಲ್ಲೂ ಪಕ್ಷದ ಗೆಲುವಿನ ಬಗ್ಗೆ ಸಲಹೆ ನೀಡಿದ್ದಾರೆ. ಅವರು ಯಾವತ್ತೂ ನಮ್ಮ ಹಿರಿಯ ನಾಯಕರಲ್ಲಿ ಒಬ್ಬರು. ಅವರ ಗೌರವಕ್ಕೆ ಕುಂದು ಬರಲು ಅವಕಾಶ ನೀಡಲ್ಲ. ಅವರು ಮಂತ್ರಿಯಾಗಿದ್ದರೆ ಅತ್ಯಂತ ಸಂತೋಷ ಪಡುವ ವ್ಯಕ್ತಿಯಲ್ಲಿ ನಾನೂ ಒಬ್ಬ ಎಂದು ಸಿ.ಟಿ.ರವಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next