Advertisement

ಮಲೆ ಮಹದೇಶ್ವರ ಬೆಟ್ಟಕ್ಕೆ ಈಶ್ವರಪ್ಪ ಭೇಟಿ

05:13 AM Jun 21, 2020 | Lakshmi GovindaRaj |

ಹನೂರು: ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸಚಿವ ಕೆ.ಎಸ್‌.ಈಶ್ವರಪ್ಪ ಭೇಟಿ ನೀಡಿ, ಮಲೆ ಮಹದೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ತಡರಾತ್ರಿಯೇ ಆಗಮಿಸಿ  ರಾಷ್ಟ್ರಪತಿ ಭನವದಲ್ಲಿ ವಾಸ್ತವ್ಯ ಹೂಡಿದ್ದ ಈಶ್ವರಪ್ಪ, ಶ್ರೀಸ್ವಾಮಿ ದರ್ಶನ ಪಡೆದರು. ಬಳಿಕ ಕ್ಷೇತ್ರದಲ್ಲಿಯೇ ಉಪಹಾರ ಸೇವಿಸಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿ ಬಳಿಕ ಕೊಳ್ಳೇಗಾಲ – ಹನೂರು ತಾಲೂಕಿನಲ್ಲಿ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಪರಿಶೀಲನೆಗಾಗಿ ಸರಗೂರಿನತ್ತ ಪ್ರಯಾಣ ಬೆಳೆಸಿದರು.

Advertisement

ಅಭಿವೃದ್ಧಿ ಮಾಹಿತಿ ಸಂಗ್ರಹ: ಸಚಿವರು ಮಲೆ ಮಹದೇಶ್ವರ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾಮಗಾರಿಗಳ ಕೈಪಿಡಿ ಪರಿಶೀಲಿಸಿ, ಮಾತನಾಡಿ, ಅಭಿವೃದ್ಧಿಗೆ  ಸರ್ಕಾರ ಅನುದಾನ ನೀಡಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ತುರ್ತು ಅವಶ್ಯಕವಾದ ಕಾಮಗಾರಿಗಳನ್ನು ಪ್ರಾಧಿಕಾರದಿಂದ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡುವುದಾಗಿ  ಭರವಸೆ ನೀಡಿದರು.

ಸಚಿವರಿಗೆ ದರ್ಶನ ಭಾಗ್ಯ:ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪೂಜಾ ಕೈಂಕರ್ಯಗಳಲ್ಲಿ ಭಕ್ತಾದಿಗಳನ್ನು ನಿಯಂತ್ರಣ ಮತ್ತು ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಮಸ್ಯೆಯಾಗುವುದನ್ನು ಮನಗಂಡ ಜಿಲ್ಲಾಡಳಿತ  ಜೂ.19ರಿಂದ 21ರವರೆಗೆ 3 ದಿನಗಳ ಕಾಲ ಮಾದಪ್ಪನ ದರ್ಶನವನ್ನು ನಿಷೇಧಿಸಲಾಗಿತ್ತು.

ಅಲ್ಲದೆ, ಕ್ಷೇತ್ರದಲ್ಲಿ ಕೋವಿಡ್‌-19 ನಿಂದಾಗಿ ರಾತ್ರಿ ವಾಸ್ತವ್ಯ ಹೂಡುವುದು ಮತ್ತು ಕೊಠಡಿಗಳನ್ನು ನೀಡುವುದನ್ನು ನಿಷೇಧಿಸಲಾಗಿದ್ದರೂ ಸಚಿವರು  ಮತ್ತು ಅವರ ಹಿಂಬಾಲಕರಿಗೆ ವಾಸ್ತವ್ಯ ಹೂಡಲು ಅವಕಾಶ ಕಲ್ಪಿಸಿ, ಕೊಠಡಿಗಳನ್ನು ನೀಡಿದ್ದಕ್ಕೆ ಮಲೆ ಮಾದಪ್ಪನ ಭಕ್ತದಿಗಳಲ್ಲಿ ಅಸಮಾಧಾನ ವ್ಯಕ್ತವಾಗಿದೆ. ದೇವರ ದರ್ಶನಕ್ಕೂ ಉಳ್ಳವರಿಗೊಂದು ನ್ಯಾಯ, ಬಡ  ಭಕ್ತಾದಿಗಳಿಗೆ ಮತ್ತೂಂದು ನ್ಯಾಯ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು.

Advertisement

Udayavani is now on Telegram. Click here to join our channel and stay updated with the latest news.

Next