Advertisement

ಈಶ್ವರಪ್ಪ ಅವರದೇ ನೇರ ಕೈವಾಡ: ದಿನೇಶ್‌ ಗುಂಡೂರಾವ್‌

08:57 PM Apr 12, 2022 | Team Udayavani |

ಬೆಂಗಳೂರು: ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್‌ ಕಮೀಷನ್‌ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಯ ಹಿಂದೆ ಈಶ್ವರಪ್ಪರ ನೇರ ಕೈವಾಡವಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಂತೋಷ್‌ ಪಾಟೀಲ್‌ ತಮ್ಮ ವಾಟ್ಸ್‌ಅಪ್‌ ಸಂದೇಶದಲ್ಲೂ ಈಶ್ವರಪ್ಪರೇ ತಮ್ಮ ಸಾವಿಗೆ ಕಾರಣ ಎಂದು ಬರೆದುಕೊಂಡಿದ್ದಾರೆ.

ಸಂತೋಷ್‌ ಸಾವಿಗೆ ಕಾರಣರಾದ ಈಶ್ವರಪ್ಪರನ್ನು ಪೊಲೀಸರು ಸೆಕ್ಷನ್‌ 306 ರ ಅಡಿ ಈ ಕೂಡಲೇ ಬಂಧಿಸಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು : ಕಟೀಲ್ ವಿಶ್ವಾಸ

ಭ್ರಷ್ಟ ಈಶ್ವರಪ್ಪರ ಬಂಡವಾಳ ಬಯಲು ಮಾಡಿದಕ್ಕಾಗಿ ಗುತ್ತಿಗೆದಾರ ಸಂತೋಷ್‌ ಪ್ರಾಣ ಕಳೆದುಕೊಳ್ಳುವಂತಾಗಿದೆ. ಕೊಲೆಗಡುಕ ಮನಃಸ್ಥಿತಿಯ ಈಶ್ವರಪ್ಪ ಸಚಿವ ಸಂಪುಟದಲ್ಲಿರಲು ನೈತಿಕತೆಯೇ ಇಲ್ಲ. ಬೊಮ್ಮಾಯಿಯವರೆ ಕೋಲೆ ಬಸವಣ್ಣನ ರೀತಿ ತಲೆ ಆಡಿಸುವುದು ಬಿಡಿ, ಈಗಲಾದರೂ ದಿಟ್ಟ ಕ್ರಮ ತೆಗೆದುಕೊಳ್ಳಿ. ಈಶ್ವರಪ್ಪರನ್ನು ಕೆಳಗಿಳಿಸಿ ನಿಮ್ಮ ಸರ್ಕಾರಕ್ಕೆ ಅಂಟಿರೋ ಕಳಂಕ ಕಳಚಿಕೊಳ್ಳಿ ಎಂದು ಹೇಳಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next