Advertisement

ಎಲ್ಲ ತಾಲೂಕುಗಳಲ್ಲಿ ದೂರು ಪೆಟ್ಟಿಗೆ ಸ್ಥಾಪನೆ

03:10 PM Oct 22, 2019 | Team Udayavani |

ಬೀದರ: ಸಾರ್ವಜನಿಕರ ಅಹವಾಲಿಗೆ ತುರ್ತಾಗಿ ಸ್ಪಂದಿಸಲು ಪಶು ಸಂಗೋಪನೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ದೂರುಪೆಟ್ಟಿಗೆ ಸ್ಥಾಪನೆಯ ಹೊಸ ಪ್ರಯೋಗಕ್ಕೆ ಸೋಮವಾರ ಖುದ್ದು ತಾವೇ ಚಾಲನೆ ನೀಡಿದರು.

Advertisement

ಬೆಳಗ್ಗೆಯಿಂದ ಸಂಜೆ ವರೆಗೆ ಸಮರೋಪಾದಿಯಲ್ಲಿ ಬೀದರ ಜಿಲ್ಲಾ ಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚರಿಸಿ ದೂರುಪೆಟ್ಟಿಗೆ ಅಳವಡಿಸಿದರು. ಸಾರ್ವಜನಿಕರ ದೂರು ಪೆಟ್ಟಿಗೆ ನಿರ್ವಹಣೆ ಸರಿಯಾಗಿ ಆಗಬೇಕು. ಪ್ರತಿ ವಾರ ಪೆಟ್ಟಿಗೆಯನ್ನು ತೆರೆಯಬೇಕು. ಸಲ್ಲಿಕೆಯಾಗುವ ಅರ್ಜಿಗಳ ಬಗ್ಗೆ ದಾಖಲಾತಿ ಪುಸ್ತಕದಲ್ಲಿ ನಮೂದಿಸಬೇಕು. ತಹಶೀಲ್ದಾರ್‌ ಹಂತದಲ್ಲಿ, ಜಿಲ್ಲಾಧಿಕಾರಿಯವರ ಹಂತದಲ್ಲಿ, ಸಚಿವರ ಹಂತದಲ್ಲಿ ಎಂಬುದಾಗಿ ಅವುಗಳನ್ನು ವಿಂಗಡಿಸಿ ವಿಲೇವಾರಿಗೆ ಕ್ರಮ ವಹಿಸಬೇಕು. ಇದರ ನಿರ್ವಹಣೆಯನ್ನು ಸಂಪೂರ್ಣವಾಗಿ ತಹಶೀಲ್ದಾರರೇ ನೋಡಿಕೊಳ್ಳಬೇಕು ಎಂದು ಎಲ್ಲಾ ತಹಶೀಲ್ದಾರರಿಗೆ ಸಚಿವರು ನಿರ್ದೇಶನ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next