Advertisement

ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

11:08 PM Sep 06, 2019 | Lakshmi GovindaRaju |

ಬೆಂಗಳೂರು: ಅತ್ಯಂತ ಹಿಂದುಳಿದ ಗಾಣಿಗ ಸಮುದಾ ಯದ ಶ್ರೇಯೋಭಿವೃದ್ಧಿಗಾಗಿ ಸಿಎಂ ಯಡಿಯೂರಪ್ಪ ಅವರು “ಗಾಣಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕೆಂದು ಗಾಣಿಗ ಸಂಘ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಾಣಿಗ ಸಂಘದ ಪದಾಧಿಕಾರಿಗಳು, ರಾಜ್ಯದ 31 ಜಿಲ್ಲೆಗಳಲ್ಲಿ 65 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗಾಣಿಗ ಸಮುದಾಯ ಪ್ರವರ್ಗ “2ಎ’ಗೆ ಸೇರಿದ್ದರೂ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ.

Advertisement

ಈ ಪ್ರವರ್ಗದಡಿ 199 ಜಾತಿಗಳಿರುವ ಕಾರಣ ಸೌಲಭ್ಯಗಳು ಸಮರ್ಪಕವಾಗಿ ಹಂಚಿಕೆಯಾಗುತ್ತಿಲ್ಲ ಎಂದು ದೂರಿದರು. ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿ ಯಾವ ಕ್ಷೇತ್ರದಲ್ಲೂ ಗಾಣಿಗ ಸಮುದಾಯದ ಬದುಕು ಪ್ರಗತಿ ಕಂಡಿಲ್ಲ. ಹೀಗಾಗಿ, “ಗಾಣಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಿದರೆ ಜನಾಂಗದ ಅಭಿವೃದ್ಧಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next