Advertisement

ಜಿಲ್ಲೆಯ 2 ಕಡೆ ಶಿಶು ಪಾಲನಾ ಕೇಂದ್ರ ಸ್ಥಾಪನೆ

04:02 PM Jun 23, 2022 | Team Udayavani |

ಹಾವೇರಿ: ನರೇಗಾ ಯೋಜನೆಯಡಿ ಹಿರೇಕೆರೂರು ತಾಲೂಕಿನ ಕೋಡ ಗ್ರಾಮ ಹಾಗೂ ಸವಣೂರ ತಾಲೂಕಿನ ತವರಮೆಳ್ಳಿ ಹಳ್ಳಿ ಗ್ರಾಮದಲ್ಲಿ ಶಿಶು ಪಾಲನಾ ಕೇಂದ್ರ ಸ್ಥಾಪನೆಗೆ ಒಪ್ಪಿಗೆ ದೊರೆತಿದೆ. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತೆ ಶಿಲ್ಪಾ ನಾಗ್‌ ಅವರು ಜಿಪಂ ಸಭಾಂಗಣದಲ್ಲಿ ಸ್ಥಾಪಿಸಲಾದ ಅವ್ವ ಶಿಶು ಪಾಲನಾ ಕೇಂದ್ರ ಹಾಗೂ ಪಿಬಿ ರಸ್ತೆ ದೇವರಾಜ ಅರಸು ಭವನದಲ್ಲಿ ಸ್ಥಾಪನೆ ಮಾಡಿರುವ ಶಿಶು ಪಾಲನಾ ಕೇಂದ್ರ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Advertisement

ಜಿಪಂ ವತಿಯಿಂದ ಗುರುತಿಸಲಾದ ಮಹಾತ್ಮ ಗಾಂಧಿಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕ ಮಹಿಳೆಯರ ಶಿಶು ಗಳಿಗೆ ಹಾಗೂ ಇತರ ಕಾರ್ಮಿಕ ವರ್ಗದ ಮಕ್ಕಳಿಗಾಗಿ ಹಿರೇಕೆರೂರು ತಾಲೂಕಿನ ಕೋಡ ಗ್ರಾಮ ಹಾಗೂ ಸವಣೂರ ತಾಲೂ ಕಿನ ತೆವರಮೆಳ್ಳಳ್ಳಿ ಗ್ರಾಮದಲ್ಲಿ ಗುರುತಿಸಲಾದ ಶಿಶು ಪಾಲನಾ ಕೇಂದ್ರದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಈ ಎರಡೂ ಸ್ಥಳಗಳಲ್ಲಿ ಮಕ್ಕಳಿಗಾಗಿ ಪೌಷ್ಟಿಕ ಆಹಾರ, ಮಕ್ಕಳ ಲಾಲನೆ-ಪಾಲನೆಗಾಗಿ ಶಿಶು ಪಾಲನಾ ಕೇಂದ್ರ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿದ ಜಿಪಂ ಸಿಇಒ ಮಹಮ್ಮದ ರೋಷನ್‌ ಅವರು, ಪ್ರಸಕ್ತ 2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 5 ತಾಲೂಕುಗಳಲ್ಲಿ ನರೇಗಾ ಯೋಜನೆಯ ಕೂಲಿಕಾರರ ಮಕ್ಕಳ ಪೌಷ್ಟಿಕತೆಯ ಸಂರಕ್ಷಣೆಗೆ ಶಿಶು ಸಂರಕ್ಷಣಾ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎರಡು ಕಡೆ ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸಲು ಸ್ಥಳ ಗುರುತಿಸಲಾಗಿದೆ ಎಂದರು.

ಪ್ರತಿ ಶಿಶುಪಾಲನಾ ಕೇಂದ್ರದ ಪ್ರಾರಂಭ ಹಾಗೂ ನಿರ್ವಹಣೆಗಾಗಿ ಗರಿಷ್ಠ ಒಂದು ಲಕ್ಷ ರೂ. ವರೆಗೆ ವೆಚ್ಚವನ್ನು ಮಹಾತ್ಮಗಾಂಧಿ ನರೇಗಾ ಯೋಜನೆಯ ಆಡಳಿತಾತ್ಮಕ ವೆಚ್ಚದಲ್ಲಿ ಭರಿಸಲು ಅನುಮತಿ ನೀಡಲಾಗಿದೆ. ಪ್ರತಿ ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳ ಆರೈಕೆಗಾಗಿ 10 ಜನ ನರೇಗಾ ಯೋಜನೆ ಅಡಿ ನೋಂದಾಯಿತ ಮಹಿಳೆಯರನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುವುದು. ಮಕ್ಕಳ ಆರೈಕೆಗಾಗಿ ಆಯ್ಕೆ ಮಾಡಲಾಗುವ ಮಹಿಳೆಯರಿಗೆ ಆರ್ಥಿಕ ವರ್ಷದಲ್ಲಿ 100 ದಿನಗಳಿಗೆ ಮೀರದಂತೆ ನರೇಗಾ ಯೋಜನೆಯಡಿ ನಿಗದಿಪಡಿಸಿದ ಕೂಲಿ ಪಾವತಿಸಲು ತಿಳಿಸಿದೆ ಎಂದು ಮಾಹಿತಿ ನೀಡಿದರು.

Advertisement

ಜಿಪಂ ಉಪಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ ಮಾತನಾಡಿ, ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಎರಡು ಶಿಶುಪಾಲನಾ ಕೇಂದ್ರ ಸ್ಥಾಪನೆಗೆ ಸ್ಥಳ ಆಯ್ಕೆ ಮಾಡಲಾಗಿದ್ದು, ಹಿರೇಕೆರೂರು ತಾಲೂಕಿನ ಕೋಡ ಗ್ರಾಮದಲ್ಲಿ(ಕೋಡ ಗ್ರಾಮದಲ್ಲಿ 1500 ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ) 20ರಿಂದ 21 ಮಕ್ಕಳಿದ್ದಾರೆ. ಸವಣೂರ ತಾಲೂಕಿನ ತವರಮೆಳ್ಳಿಹಳ್ಳಿ ಗ್ರಾಮದಲ್ಲಿ 200ಕ್ಕೂ ಹೆಚ್ಚು ಕೂಲಿಕಾರರು ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ(9 ಮಕ್ಕಳಿವೆ)ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಹಳ್ಳಿ ಮಾತನಾಡಿ, ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ, ಹನುಮರಹಳ್ಳಿ ಹಾಗೂ ಹಾವೇರಿ ತಾಲೂಕಿನ ದೇವರಾಜ ಅರಸು ಭವನದಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಚಿಕ್ಕಮಕ್ಕಳಿಗೆ ಹಾಲುಣಿಸುವುದು ಹಾಗೂ ಇತರೆ ಪೋಷಣೆಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಶಿಶುಪಾಲನಾ ಕೇಂದ್ರ ಅತ್ಯಗತ್ಯವಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಎರಡು ಕಡೆ ಶಿಶು ಪಾಲನಾ ಕೇಂದ್ರ ಆರಂಭಿಸಲು ಸ್ಥಳ ಗುರುತಿಸಲಾಗಿದೆ. ಪ್ರತಿ ಶಿಶುಪಾಲನಾ ಕೇಂದ್ರದ ಪ್ರಾರಂಭ ಹಾಗೂ ನಿರ್ವಹಣೆಗಾಗಿ ಗರಿಷ್ಠ ಒಂದು ಲಕ್ಷ ರೂ. ವರೆಗೆ ಮಹಾತ್ಮಗಾಂಧಿ ನರೇಗಾ ಯೋಜನೆಯ ಆಡಳಿತಾತ್ಮಕ ವೆಚ್ಚದಲ್ಲಿ ಭರಿಸಲು ಅನುಮತಿ ನೀಡಲಾಗಿದೆ. ಪ್ರತಿ ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳ ಆರೈಕೆಗಾಗಿ 10 ಜನ ನರೇಗಾ ಯೋಜನೆಯಡಿ ನೋಂದಾಯಿತ ಮಹಿಳೆಯರನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುವುದು. –ಮಹಮ್ಮದ್‌ ರೋಷನ್‌, ಜಿಪಂ ಸಿಇಒ

Advertisement

Udayavani is now on Telegram. Click here to join our channel and stay updated with the latest news.

Next