Advertisement

ರಾಜ್ಯ ಸರ್ಕಾರದಿಂದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಘೋಷಣೆ: ಡಾ.ಭರತ್ ಶೆಟ್ಟಿ ವೈ ಹರ್ಷ

11:19 AM Jan 06, 2023 | Team Udayavani |

ಮಂಗಳೂರು: ರಾಜ್ಯದ ಬಿಲ್ಲವ ಈಡಿಗ ಸಮಾಜದ ಬೇಡಿಕೆಯನ್ನು ರಾಜ್ಯ ಸರಕಾರ ಪ್ರಮುಖ ಆದ್ಯತೆಯಾಗಿ ತೆಗೆದುಕೊಂಡು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಲು ನಿರ್ಧರಿಸಿದೆ.

Advertisement

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಬಿಲ್ಲವ ಸಮಾಜವನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಸಮಾಜಕ್ಕೆ ಹಲವಾರು ರೀತಿಯಲ್ಲಿ ಸೌಲಭ್ಯಗಳನ್ನು ನೀಡಿದೆ. ಇದೀಗ ಅಭಿವೃದ್ಧಿ ನಿಗಮ ಮಂಡಳಿಯ ಮೂಲಕ ಮತ್ತಷ್ಟು ಸವಲತ್ತು ದೊರಕಲಿದೆ.

ನಿಗಮ ಮಂಡಳಿಯ ರಚನೆಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next