Advertisement

ಮೂರು ವರ್ಷಗಳಲ್ಲಿ ಎತ್ತಿನಹೊಳೆ ಪೂರ್ಣ: ಬೊಮ್ಮಾಯಿ

11:46 PM Feb 04, 2021 | Team Udayavani |

ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಮುಂದಿನ 3 ವರ್ಷಗಳಲ್ಲಿ ಪೂರ್ಣಗೊಳಿಸಲು ಯೋಜಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ವೇಳೆ ಬಿಜೆಪಿಯ ವೈ. ಎ. ನಾರಾಯಣ ಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೊದಲ ಹಂತ ಪೂರ್ಣಗೊಂಡಿದ್ದು, 7,271 ಕೋ.ರೂ. ವ್ಯಯಿಸಲಾಗಿದೆ. ಏಳು ಬ್ಯಾರೇಜ್‌ಗಳನ್ನು ನಿರ್ಮಿಸಿ ನೀರು ಸಂಗ್ರಹಿಸಲು ವ್ಯವಸ್ಥೆ ಮಾಡಲಾಗಿದೆ.

2013ರ ಭೂಸ್ವಾಧೀನ ಪ್ರಕ್ರಿಯೆಯನ್ನು ನಡೆಸಬೇಕಾಗಿದೆ. ಈ ವರ್ಷ 890 ಕೋಟಿ ರೂ. ಮೀಸಲಿಡಲಾಗಿದೆ. 2ನೇ ಹಂತಕ್ಕೆ ವಿಶೇಷವಾಗಿ ಭೈರಗೊಂಡ್ಲು ಜಲಾಯಶ ನಿರ್ಮಾಣಕ್ಕೆ ಆದಷ್ಟು ಬೇಗ ಭೂಸ್ವಾಧೀನ, ಕಾಮಗಾರಿ ಆರಂಭ, ಬ್ಯಾರೇಜ್‌ಗಳ ನಿರ್ಮಾಣ, ನೀರಿನ ಸಂಗ್ರಹಣೆಗೆ ಸಂಬಂಧಿಸಿದ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next