Advertisement

ಮೌಲ್ಯಮಾಪನ ಬಹಿಷ್ಕಾರ:ಪದವಿ ಪೂರ್ವ ಉಪನ್ಯಾಸಕರ ಸಂಘದ ಎಚ್ಚರಿಕೆ

12:30 AM Mar 13, 2019 | Team Udayavani |

ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸದೆ ಇದ್ದರೆ, ಮಾ.21ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಮಾಪನ ಬಹಿಷ್ಕರಿಸಲು ಉಪನ್ಯಾಸಕರ ಸಂಘ ನಿರ್ಧರಿಸಿದೆ.

Advertisement

ದ್ವಿತೀಯ ಪಿಯುಸಿ ಪರೀಕ್ಷೆ ಮಾ.18ಕ್ಕೆ ಮುಗಿಯಲಿದೆ. 6.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಮಾ.21ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದ್ದು, ಸರ್ಕಾರ ಸೂಕ್ತ ಸ್ಪಂದನೆ ನೀಡದೇ ಇದ್ದರೆ ಉಪನ್ಯಾಸಕರ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮಂಗಳವಾರ ನಡೆದ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.

ಪಿಯು ಇಲಾಖೆಯ ರಜೆ ಕಡಿತ ಮಾಡಿ ದ್ವಿತೀಯ ಪಿಯುಸಿ ತರಗತಿಗಳನ್ನು ಮೇ 1ರಿಂದ ಆರಂಭಿಸುವುದು ಸರಿಯಲ್ಲ. ಹಾಗೆಯೇ ವೇತನ ತಾರತಮ್ಯ ಇನ್ನೂ ನಿವಾರಿಸಿಲ್ಲ. 18 ಪ್ರಮುಖ ಬೇಡಿಕೆಗಳನ್ನು ಲಿಖೀತ ರೂಪದಲ್ಲಿ ಸರ್ಕಾರಕ್ಕೆ ನೀಡಿದ್ದರೂ, ಸ್ಪಂದನೆ ದೊರೆತಿಲ್ಲ. 20ರವರೆಗೂ ಕಾಯುತ್ತೇವೆ.  ಅಲ್ಲಿಯವರೆಗೂ ಯಾವುದೇ ಸಂದನೆ ಸಿಗದೇ ಇದ್ದರೆ ಮಾ.21ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಿದ್ದೇವೆ. ನಮ್ಮ ನಿರ್ಧಾರಕ್ಕೆ ವಿಧಾನ ಪರಿಷತ್‌ ಸದಸ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next