Advertisement

Politics: ಸತ್ತರೂ ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ: ಶಿವರಾಜ್‌ ಸಿಂಗ್‌ ಚೌಹಾಣ್‌

08:45 PM Dec 12, 2023 | Pranav MS |

ಭೋಪಾಲ್‌: “ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬೇಕಿದ್ದರೆ ನಾನು ಸಾಯುತ್ತೇನೆ. ಆದರೆ, ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗುತ್ತೇನೆ. ಪಕ್ಷ ವಹಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ’ ಎಂದು ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಸ್ಪಷ್ಟಪಡಿಸಿದ್ದಾರೆ.

Advertisement

ಚೌಹಾಣ್‌ ಅವರು ಮಂಗಳವಾರ ಸಿಎಂ ಕಚೇರಿಯನ್ನು ತೆರವುಗೊಳಿಸಿದ ನಂತರ ಅವರು ಮಾತನಾಡಿದರು. “ಯಾವುದೇ ಅನ್ಯಾಯ ಆಗಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಬಿಜೆಪಿ ಗುರುತಿಸಿ, 18 ವರ್ಷಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಈಗ ಪಕ್ಷಕ್ಕ ಋಣ ಸಂದಾಯ ಮಾಡುವ ಸಮಯ ಬಂದಿದೆ. ನೂತನ ಸಿಎಂ ಮೋಹನ್‌ ಯಾದವ್‌ ಅವರ ನಾಯಕತ್ವದಲ್ಲಿ ಮಧ್ಯಪ್ರದೇಶವು ಮತ್ತಷ್ಟು ಪ್ರಗತಿ ಕಾಣಲಿದೆ ಎಂಬ ವಿಶ್ವಾಸ ನನಗಿದೆ’ ಎಂದು ಚೌಹಾಣ್‌ ಹೇಳಿದ್ದಾರೆ.

ಚೌಹಾಣ್‌ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಲಾಡ್ಲಿ ಬೆಹೆನ್‌ ಯೋಜನೆಯ ಫ‌ಲಾನುಭವಿ ಮಹಿಳೆಯರು ಕಣ್ಣೀರು ಸುರಿಸತೊಡಗಿದರು. ಅವರನ್ನು ಚೌಹಾಣ್‌ ಸಮಾಧಾನಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next