Advertisement

ಕೊರೊನಾ ಸಹ ಕಮಲ್ ನಾಥ್ ಸರ್ಕಾರವನ್ನು ರಕ್ಷಿಸಲ್ಲ: ಮಾಜಿ ಸಿಎಂ ಶಿವರಾಜ್ ಸಿಂಗ್

10:16 AM Mar 17, 2020 | Nagendra Trasi |

ನವದೆಹಲಿ: ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ನೇತೃತ್ವದ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ಸೋಮವಾರ ವಿಧಾನಸಭೆ ಕಲಾಪವನ್ನು ಸ್ಪೀಕರ್ ಮಾ.26ರವರೆಗೆ ಮುಂದೂಡುವ ಮೂಲಕ ಮತ್ತೆ ಹತ್ತು ದಿನಗಳ ಕಾಲಾವಕಾಶ ದೊರಕಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವಾಣ್ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

Advertisement

ಕೊರೊನಾ ವೈರಸ್ ಕೂಡಾ ಕಮಲ್ ನಾಥ್ ಸರ್ಕಾರವನ್ನು ರಕ್ಷಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇಂದು ಮಧ್ಯಪ್ರದೇಶದ ಬಜೆಟ್ ಅಧಿವೇಶನ ಆರಂಭಗೊಂಡ ಒಂದು ಗಂಟೆಯಲ್ಲಿಯೇ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸ್ಪೀಕರ್ ಪ್ರಜಾಪತಿ ಬಹುಮತ ಸಾಬೀತು ಪಡಿಸಲು ಆದೇಶ ನೀಡದೆ ವಿಧಾನಸಭೆ ಕಲಾಪವನ್ನು ಮಾರ್ಚ್ 26ರವರೆಗೆ ಮುಂದೂಡಿದ್ದರು.

ಸ್ಪೀಕರ್ ಪ್ರಜಾಪತಿ ವಿಧಾನಸಭೆ ಕಲಾಪದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡದೆ ಏಕಾಏಕಿ ಮುಂದೂಡಿಕೆ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಬಳಿಕ ಶೀಘ್ರವೇ ಕಮಲ್ ನಾಥ್ ಸರ್ಕಾರ ಬಹುಮತ ಸಾಬೀತುಪಡಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ನಾಳೆ ವಿಚಾರಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next