Advertisement

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ತನ್ನ ನಿಲುವು ಬದಲಿಸುವುದಿಲ್ಲ:ಅಮಿತ್ ಪಾಟ್ಕರ್

11:46 AM May 14, 2023 | Team Udayavani |

ಪಣಜಿ: ಕರ್ನಾಟಕಕ್ಕೆ ಮಹದಾಯಿ ನದಿ ನೀರನ್ನು  ತಿರುಗಿಸಲು ಗೋವಾ ಪ್ರದೇಶ ಕಾಂಗ್ರೆಸ್ ತೋರಿದ ವಿರೋಧ ಖಾಯಂ ಆಗಿ ಉಳಿಯಲಿದೆ. ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ತಿರುಗಿಸಲು ಗೋವಾ ಕಾಂಗ್ರೆಸ್ ಪಕ್ಷದ ವಿರೋಧವಿದೆ. ಕರ್ನಾಟಕ ರಾಜ್ಯದಲ್ಲಿ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ  ತನ್ನ ನಿಲುವು ಬದಲಿಸುವುದಿಲ್ಲ ಎಂದು ಗೋವಾ ಪ್ರದೇಶ ಕಾಂಗ್ರೆಸ್ ಸಮೀತಿಯ ರಾಜ್ಯಾಧ್ಯಕ್ಷ ಅಮಿತ್ ಪಾಟ್ಕರ್  ಹೇಳಿದ್ದಾರೆ.

Advertisement

ಪಣಜಿ ಕಾಂಗ್ರೇಸ್ ಭವನದಲ್ಲಿ ಕಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಪಾತ್ರವೇನು? ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಪಾಟ್ಕರ್ ಉತ್ತರಿಸಿದರು.

ಕರ್ನಾಟಕ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮಹದಾಯಿ ಕಾಮಗಾರಿಗೆ 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಆ ಸಂದರ್ಭದಲ್ಲಿ ನಮ್ಮ ನಿಲುವನ್ನು ಮಂಡಿಸಲಿದ್ದೇವೆ ಎಂದರು.

ಮಹದಾಯಿ ನದಿ ನೀರು ವಿಷಯದಲ್ಲಿ ಗೋವಾ ಕಾಂಗ್ರೆಸ್ ಪರವಾಗಿ ದಕ್ಷಿಣ ಗೋವಾದ ಸಂಸದರು ಮತ್ತು ವಿರೋಧ ಪಕ್ಷದ ನಾಯಕರು ತಮ್ಮ ಪರವಾಗಿ ಮಂಡಿಸಲಿದ್ದಾರೆ. ಆದರೆ, ಮಹದಾಯಿ ನೀರನ್ನು ಕರ್ನಾಟಕಕ್ಕೆ ಹರಿಸಲು ಗೋವಾ ಕಾಂಗ್ರೆಸ್ ಪಕ್ಷದ ವಿರೋಧ ಖಾಯಂ ಆಗಿ ಮುಂದುವರೆಯಲಿದೆ.  ಬಿಜೆಪಿ ಈಗಾಗಲೇ ಮಹದಾಯಿಯನ್ನು ಕರ್ನಾಟಕಕ್ಕೆ ಮಾರಿದೆ ಎಂದು ಹೇಳುವ ಮೂಲಕ ಕಾಂಗ್ರೇಸ್ ರಾಜ್ಯಾಧ್ಯಕ್ಷ ಅಮಿತ್ ಪಾಟ್ಕರ್ ತಮ್ಮ ಪಕ್ಷವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next