Advertisement

ಠೇವಣಿ ಇದ್ದರೂ ಸಾಲ ಮನ್ನಾ ಖಚಿತ

06:00 AM Sep 19, 2018 | |

ಬೆಂಗಳೂರು: ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟ ರೈತರಿಗೆ ರಾಜ್ಯ ಸರಕಾರದ ಸಾಲ ಮನ್ನಾ ಯೋಜನೆ ಅನ್ವಯ ಆಗುವುದಿಲ್ಲ ಎಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ರಾಜ್ಯ ಸರಕಾರ ನಿರ್ಧರಿಸಿದೆ. ಠೇವಣಿ ಇದ್ದರೆ ಸಾಲ ಮನ್ನಾ ಇಲ್ಲ ಎಂಬ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್‌ ಮಂಗಳವಾರ ಸಹಕಾರ ಇಲಾಖೆಯ ಅಧಿಕಾರಿಗಳು ಹಾಗೂ ಸಹಕಾರ ಸಂಘಗಳ ಪ್ರಧಾನ ನಿಬಂಧಕರ ಸಭೆ ನಡೆಸಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸರಕಾರದ ಉನ್ನತ ಮೂಲಗಳ ಪ್ರಕಾರ ರಾಜ್ಯದ 21 ಜಿಲ್ಲಾ ಸಹಕಾರಿ ಬ್ಯಾಂಕ್‌ಗಳು ಹಾಗೂ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಸುಮಾರು 30 ಸಾವಿರ ಕೋಟಿ ರೂಪಾಯಿ ಠೇವಣಿ ಇಡಲಾಗಿದೆ. ಇದರಲ್ಲಿ ಬಹುತೇಕ ಸಣ್ಣ ಹಿಡುವಳಿದಾರರೇ ಸಣ್ಣ ಪ್ರಮಾಣದ ಹಣ ಠೇವಣಿ ಇಟ್ಟಿರುವುದರಿಂದ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯ ಪ್ರಯೋಜನದಿಂದ ವಂಚಿತರಾಗುವ ಸಾಧ್ಯತೆ ಇದೆ. 

ಈ ಹಿನ್ನೆಲೆಯಲ್ಲಿ ಸಚಿವರು ಈ ನಿರ್ಧಾರ ಕೈಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಠೇವಣಿ ಇಟ್ಟ ರೈತರದ್ದೂ ಸಾಲ ಮನ್ನಾ ಮಾಡುವ ಹೊಸ ಅಧಿಸೂಚನೆ ಹೊರಡಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next