Advertisement

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

05:05 PM May 08, 2024 | Team Udayavani |

■ ಉದಯವಾಣಿ ಸಮಾಚಾರ
ಬಳ್ಳಾರಿ: ಪ್ರಜ್ವಲ್‌ ರೇವಣ್ಣ ಪ್ರಕರಣ ಕಾನೂನು ಹಂತದಲ್ಲಿ ತನಿಖೆ ನಡೆಯುತ್ತಿದ್ದರೂ ಬಿಜೆಪಿಯವರು ಅನಾವಶ್ಯಕವಾಗಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿರುಗೇಟು ನೀಡಿದರು.

Advertisement

ಲೋಕಸಭೆ ಚುನಾವಣೆ ನಿಮಿತ್ತ ನಗರದ ನೆಹರೂ ಕಾಲೋನಿಯ ವುಂಕಿ ಮರಿಸಿದ್ದಮ್ಮ ಶಾಲೆ ಮತಗಟ್ಟೆಯಲ್ಲಿ ಸರತಿ ಸಾಲಲ್ಲಿ ನಿಂತು ಕುಟುಂಬ ಸಮೇತ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಜ್ವಲ್‌ ರೇವಣ್ಣ ಪ್ರಕರಣ ಬಿಜೆಪಿ ಜೆಡಿಎಸ್‌ ಮೈತ್ರಿ ಮೇಲೆ ಪರಿಣಾಮ ಬೀರಿದೆ. ಅದಕ್ಕಾಗಿ ಬಿಜೆಪಿಯವರು ಕಾಂಗ್ರೆಸ್‌ ಮೇಲೆ ವಿನಾಕಾರಣ ಆರೋಪ
ಮಾಡುತ್ತಿದೆ. ಮುಖ್ಯವಾಗಿ ಕರ್ನಾಟಕದ ಚುನಾವಣೆ ಮೇಲೆ ಪ್ರಜ್ವಲ್‌ ಪ್ರಕರಣ ಪ್ರಭಾವ ಬೀರಿದೆ.

ಬಿಜೆಪಿಯವರು ಸೋಲಿನ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮಾಡಿದ ಕೃತ್ಯವನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್‌ ಪ್ರಕರಣದ ಹಿಂದೆ ಯಾವ ಷಡ್ಯಂತರವೂ ಇಲ್ಲ. ಪಾಪ ಮಾಡಿದವರು ಅನುಭವಿಸುತ್ತಾರೆ ಎಂದು ತಿಳಿಸಿದರು.

ಇದೇ ವೇಳೆ ಮಹಾನಾಯಕ ಅಂದರೆ ಯಾರು? ಎಂದು ಪ್ರಶ್ನಿಸಿದ ಸಚಿವ ಬಿ.ನಾಗೇಂದ್ರ, ನಾವು ಸಹ ಕಾತುರದಿಂದ ಕಾಯುತ್ತಿದ್ದೇವೆ. ಬಿಜೆಪಿಯಮಹಾನಾಯಕ ಅಥವಾ ಜೆಡಿಎಸ್‌ ಪಕ್ಷದ  ಮಹಾನಾಯಕನಾ? ಈ ಪ್ರಕರಣದಲ್ಲಿ ಯಾರು
ಭಾಗಿಯಾಗಿಲ್ಲ ಎಂದು ಪ್ರಜ್ವಲ್‌ ಕಾರು ಚಾಲಕ ಹೇಳಿಕೆ ನೀಡಿದ್ದಾರೆ. ಇದು ನನ್ನ ವೈಯಕ್ತಿಕ ಅಂತ ಚಾಲಕ ಈಗಾಗಲೇ ಸಷ್ಟಪಡಿಸಿದ್ದಾರೆ. ಆದರೂ, ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ.

ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಸಹ ಹೇಳಿಕೆ ಕೊಡುವುದು ಸರಿಯಲ್ಲ. ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮೇಲೆ ಆರೋಪ ಮಾಡುವುದು ಸರಿಯಲ್ಲ. ಡಿ.ಕೆ. ಶಿವಕುಮಾರ್‌ ಯಾವುದೇ ತಪ್ಪು ಮಾಡಿಲ್ಲ. ಅವರ ಪಾತ್ರವೂ ಇಲ್ಲ. ಪ್ರಕರಣವನ್ನು ಮಾಧ್ಯಮದವರೇ ಬೆಳಕಿಗೆ ತಂದಿದ್ದಾರೆ. ಪ್ರಕರಣದಿಂದ ಬಿಜೆಪಿಗೆ ಚುನಾವಣೆಗೆ ಹಿನ್ನಡೆಯಾಗುವುದು ಖಚಿತ ಎಂದು ಭವಿಷ್ಯ ನುಡಿದ ಸಚಿವ ನಾಗೇಂದ್ರ, ಚುನಾವಣೆಯಲ್ಲಿ ಧರ್ಮಕ್ಕೆ ಜಯಸಿಗಲಿದೆ. ಕಾಂಗ್ರೆಸ್‌ ಧರ್ಮದ ಪರವಾಗಿದೆ ಎಂದು ತಿಳಿಸಿದರು.

Advertisement

ಬಿರುಬಿಸಿಲು ಲೆಕ್ಕಿಸದೆ ಜನರು ಮತದಾನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ನಾಗೇಂದ್ರ, ಮೊದಲ ಹಂತಕ್ಕಿಂದ ಎರಡನೇ ಹಂತದ ಚುನಾವಣೆ ಉತ್ತಮವಾಗಿದೆ. ಗ್ಯಾರೆಂಟಿಗಳಿಂದ ಮಹಿಳೆಯರು ಹೆಚ್ಚು ಮತದಾನ ಮಾಡುತ್ತಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಶೇ.70ಕ್ಕಿಂತ ಹೆಚ್ಚು ಮತದಾನ ಆಗುವ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next