Advertisement

ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ದೊರೆಯಲಿ

02:49 PM Apr 14, 2022 | Team Udayavani |

ಬಳ್ಳಾರಿ: ಜನರ ಆರೋಗ್ಯದ ಕಾಳಜಿಗೆ ಸಂಬಂಧಿಸಿದಂತೆ ಅಗತ್ಯ ಸೌಲಭ್ಯಗಳು ಈ ಆರೋಗ್ಯ ಮೇಳಗಳ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಜೆ.ಲಿಂಗಮೂರ್ತಿ ಹೇಳಿದರು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳಗಳ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 75ನೇ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೇಳಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಬೇಕು. ಅದಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಎಲ್ಲ ಇಲಾಖೆಗಳಿಂದ ಸುತ್ತೂಲೆ ನೀಡುವುದರ ಮೂಲಕ ಪ್ರಚಾರ ಮಾಡಬೇಕು. ಇದರಿಂದ ಸಾಮಾನ್ಯ ಜನರು ಆರೋಗ್ಯ ಮೇಳದಲ್ಲಿ ಹೆಚ್ಚು ಪಾಲ್ಗೊಳ್ಳಲು ಸಹಾಯವಾಗುತ್ತದೆ ಎಂದರು.

ಆರೋಗ್ಯ ಮೇಳದಲ್ಲಿ ಭಾಗವಹಿಸುವವರ ನೋಂದಣಿ, ಡಿಜಿಟಲ್‌ ಐಡಿ, ಸ್ಥಳದಲ್ಲಿಯೇ ಹೆಲ್ತ್‌ ಕಾರ್ಡ್‌ ವಿತರಣೆ, ಔಷಧಿ ವಿತರಣೆ ಹಾಗೂ ಇಂಟರ್‌ನೆಟ್‌ ಸೌಲಭ್ಯ ಸೇರಿದಂತೆ ಅಗತ್ಯ ಸೇವೆಗಳಿಗೆ ಸಂಬಂಧಿಸಿದಂತೆ ಕೌಂಟರ್‌ಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಡಿಎಚ್‌ಒ ಡಾ| ಎಚ್.ಎಲ್. ಜನಾರ್ಧನ ಮಾತನಾಡಿ, ಈ ಆರೋಗ್ಯ ಮೇಳವು ಬಳ್ಳಾರಿ, ಕಂಪ್ಲಿ, ಸಂಡೂರು ತಾಲೂಕುಗಳಲ್ಲಿ ನಡೆಯಲಿದ್ದು, ಆರೋಗ್ಯ ಮೇಳಕ್ಕೆ ಸಂಬಂಧಿಸಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ವಿಮ್ಸ್‌ ನಿರ್ದೇಶಕ ಡಾ| ಗಂಗಾಧರ ಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next