Advertisement

ಅಣ್ಣ-ತಮ್ಮನ ಸೇವೆ ಎಲ್ಲರಿಗೂ ಗೊತ್ತಿದೆ: ಎಚ್‌ಡಿಕೆ ಟಾಂಗ್‌

11:58 PM Apr 01, 2024 | Team Udayavani |

ಬೆಂಗಳೂರು: ಅಣ್ಣ-ತಮ್ಮ ರಾಮನಗರ ಜನತೆಯ ಸೇವೆ ಯಾವ ರೀತಿ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜನರ ಸೇವೆ ಮಾಡಲು ಅಣ್ಣ – ತಮ್ಮ ಇರುವುದು ಎಂದು ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆ ಬಗ್ಗೆ ತೀಕ್ಷ್ಣವಾಗಿ ಉತ್ತರಿಸಿದ ಕುಮಾರಸ್ವಾಮಿ, ಅವರು ಏನು ಸೇವೆ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ.

ಬೆಂಗಳೂರಿನಲ್ಲಿ ಫ್ಲ್ಯಾಟ್‌ ಪ್ಲ್ಯಾನ್‌ ಮಂಜೂರಾತಿಗೆ ಪ್ರತೀ ಚದರ ಅಡಿಗೆ 100 ರೂಪಾಯಿ ನಿಗದಿ ಮಾಡಿರುವುದು ಸೇವೆ ಅಲ್ಲವೇ? ಅದು ಒಂದು ಸೇವೆ. ಎಲ್ಲರಿಗೂ ಧಮ್ಕಿ ಹಾಕುವುದು ಒಂದು ಸೇವೆ, ಅದನ್ನೆ ತಾನೇ ಮಾಡುತ್ತಿರುವುದು ಎಂದು ಕುಟುಕಿದರು.

ಅವರ ಸೇವೆಯೇ ಬೇರೆ ರೀತಿ. ಸೇವೆ ಮಾಡುತ್ತಿದ್ದಾರೋ ಅಥವಾ ರಾಜ್ಯವನ್ನು ಯಾವ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೋ ಮುಂದಿನ ದಿನಗಳಲ್ಲಿ ನೋಡೋಣ. ನಾವು ಯಾತಕ್ಕೆ ಇದ್ದೀವಿ? ನಾವು ನಿದ್ದೆ ಮಾಡೋಕೆ ಬಂದಿದ್ದೀವಾ? ಅವರು ಮಾತ್ರವಾ ಸೇವೆ ಮಾಡೋದು? ಪಾಪ.. ಪಂಚಾಯತ್‌ ಸದಸ್ಯರ ರೀತಿ ಕೆಲಸ ಮಾಡು
ತ್ತಾರಂತೆ. ಹಾಗಾದರೆ, ಪಂಚಾಯತ್‌ ಸದಸ್ಯರು ಯಾಕೆ? ಇವರು ಅಲ್ಲಿ ಹೋಗಿ ಕೈ ಹಾಕಿದರೆ ಪಂಚಾಯತ್‌ ಸದಸ್ಯರು ಏನು ಮಾಡಬೇಕು? ಅವರ ಮಾತುಗಳಿಗೂ ನಡುವಳಿಕೆಗೂ ಬಹಳ ವ್ಯತ್ಯಾಸ ಇದೆ ಎಂದು ಕುಮಾರಸ್ವಾಮಿ ಕುಟುಕಿದರು. ನಾನು ಬೆಂಗಳೂರು ಗ್ರಾಮಾಂತರ, ಕನಕಪುರ, ರಾಮನಗರ, ಚನ್ನಪಟ್ಟಣ, ಕುಣಿಗಲ್‌ನಲ್ಲಿ ಪ್ರವಾಸ ಮಾಡುವೆ. ತುಮಕೂರು, ಚಾಮರಾಜನಗರ, ಮೈಸೂರು ಕೋಲಾರ, ಚಿಕ್ಕಬಳ್ಳಾಪುರ ಸಹಿತ 14 ಕಡೆ ಪ್ರಚಾರ ನಡೆಸುತ್ತೇನೆ ಎಂದು ಎಚ್‌ಡಿಕೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next