Advertisement

Andhra Pradesh: ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ವಶ: ಅರ್ಜಿಗೆ ತಡೆ

08:03 PM Sep 13, 2023 | Team Udayavani |

ಅಮರಾವತಿ: ಕೌಶಲಾಭಿವೃದ್ಧಿ ನಿಗಮದ ಹಣ ದುರಪಯೋಗ ಪ್ರಕರಣದಲ್ಲಿ ಬಂಧಿತರಾಗಿರುವ ಟಿಡಿಪಿ ಮುಖ್ಯಸ್ಥ, ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರನ್ನು 15 ದಿನಗಳ ಕಾಲ ವಶಕ್ಕೆ ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಗೆ ಸೆ.18ರವರೆಗೆ ಆಂಧ್ರ ಪ್ರದೇಶ ಹೈಕೋರ್ಟ್‌ ತಡೆ ನೀಡಿದೆ.

Advertisement

ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್‌ ರದ್ದು ಕೋರಿ ಚಂದ್ರಬಾಬು ನಾಯ್ಡು ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಸೆ.19ಕ್ಕೆ ಮುಂದೂಡಿದೆ. ಇದೇ ವೇಳೆ ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಆಂಧ್ರ ಪ್ರದೇಶ ಸಿಐಡಿಗೆ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next