Advertisement

ದರೋಡೆಗೆ ವಿರೋಧ; ನಿವೃತ್ತ ಸೇನಾಧಿಕಾರಿಯನ್ನು ಹತ್ಯೆಗೈದ ಅಪರಿಚಿತ ಗುಂಪು

08:40 AM Jul 30, 2019 | Team Udayavani |

ಅಮೇಠಿ: ಅಪರಿಚಿತ ವ್ಯಕ್ತಿಗಳ ಗುಂಪೊಂದು ನಿವೃತ್ತ ಸೇನಾಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಅಮೇಠಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ರಾತ್ರಿ ವೇಳೆ ಏಕಾಏಕಿ ಮನೆಯೊಳಗೆ ನುಗ್ಗಿದ  ಗುಂಪೊಂದು ದೊಣ್ಣೆಗಳಿಂದ ಅಮಾನತ್‌ ಉಲ್ಲಾ ಅವರ ಮೇಲೆ ಹಲ್ಲೆ ಮಾಡಿದೆ. ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದಿರಿಂದ ಅವರು ಮೃತಪಟ್ಟಿದ್ದಾರೆ ಎಂದು ಅಮಾನತ್‌ ಅವರ ಪುತ್ರ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಮ್ಮ ಮನೆ ಮುಂಭಾಗದಲ್ಲಿರುವ ಅಂಗಡಿಯಲ್ಲಿನ ಸಾಮಾನುಗಳನ್ನು ಕಳವು ಮಾಡಲು ಯತ್ನಿಸುತ್ತಿರುವಾಗ ಪತಿ ಅಮಾನುಲ್ಲಾ ತಡೆದಿದ್ದರು. ನಾನು ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದಾಗ ಗುಂಪು ಏಕಾಏಕಿ ಮನೆಯೊಳಗೆ ನುಗ್ಗಿ ಹಲ್ಲೆ ನಡೆಸಿರುವುದಾಗಿ ಅಮಾನುಲ್ಲಾ ಪತ್ನಿ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ವಿವರಿಸಿದ್ದಾರೆ ಎಂದು ಎಎಸ್ ಪಿ ದಯಾರಾಮ್ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳನ್ನು ಹತ್ತಿಕ್ಕುವಲ್ಲಿ ಬಿಜೆಪಿ ನೇತೃತ್ವದ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next