Advertisement

2600 ಕೋಟಿ ಅವ್ಯವಹಾರ? ಸಿಎಂ, ಜಾರ್ಜ್ ವಿರುದ್ಧ ಮತ್ತೆ ದೂರು

12:42 PM Oct 30, 2017 | Team Udayavani |

ಬೆಂಗಳೂರು:ಬೆಂಗಳೂರಿನ ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಅವ್ಯವಹಾರ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ ಸುಮಾರು 600 ಕೋಟಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ ಎಂದು ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್ ಆರ್ ರಮೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಾರ್ಜ್ ವಿರುದ್ಧ ಎಸಿಬಿಯಲ್ಲಿ ಮತ್ತೆ 2 ಪ್ರತ್ಯೇಕ ದೂರು ದಾಖಲಿಸಿದ್ದಾರೆ.

Advertisement

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಮೇಶ್, 2,600 ಕೋಟಿ ರೂಪಾಯಿ ಅವ್ಯವಹಾರದಲ್ಲಿ, ಸಿಎಂ ಹಾಗೂ ಜಾರ್ಜ್ ಬಿಬಿಎಂಪಿ ಕಾಮಗಾರಿಯಲ್ಲಿ 600 ಕೋಟಿ ರೂಪಾಯಿಯಷ್ಟು ಕಿಕ್ ಬ್ಯಾಕ್ ಪಡೆದಿರುವುದಾಗಿ ಆರೋಪಿಸಿದರು. ಅಲ್ಲದೇ ಬರೋಬ್ಬರಿ 3097 ಪುಟಗಳಷ್ಟು ದಾಖಲೆ ಬಿಡುಗಡೆ ಮಾಡಿದರು.

ರಸ್ತೆ ಅಭಿವೃದ್ಧಿಯ ಹೆಸರಿನಲ್ಲಿ 400 ಕೋಟಿ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ 200 ಕೋಟಿ ಕಿಕ್ ಬ್ಯಾಕ್ ಪಡೆದಿರುವುದಾಗಿ ರಮೇಶ್ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next