Advertisement

AAP ಮಾನ್ಯತೆ, ಪಕ್ಷದ ಚಿಹ್ನೆ ರದ್ದುಪಡಿಸಿ: 56 ನಿವೃತ್ತ ಅಧಿಕಾರಿಗಳಿಂದ ಆಯೋಗಕ್ಕೆ ಪತ್ರ

12:45 PM Sep 16, 2022 | Team Udayavani |

ನವದೆಹಲಿ: ಸರ್ಕಾರಿ ಅಧಿಕಾರಿಗಳು ತಮ್ಮ ಪಕ್ಷದ ಪರವಾಗಿ ಕೆಲಸ ನಿರ್ವಹಿಸಬೇಕೆಂದು ಪ್ರಚೋದಿಸಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಮಾನ್ಯತೆಯನ್ನು ರದ್ದುಪಡಿಸಬೇಕೆಂದು ಕೋರಿ 56 ನಿವೃತ್ತ ಐಎಎಸ್, ಐಪಿಎಸ್, ಐಆರ್ ಎಸ್ ಅಧಿಕಾರಿಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

Advertisement

ಇದನ್ನೂ ಓದಿ:ಭಾರತ್ ಜೋಡೋ ಯಾತ್ರೆಗೆ ಗೂಂಡಾಗಿರಿ ಮೂಲಕ ದೇಣಿಗೆ ಸಂಗ್ರಹ: ವಿಡಿಯೋ ವೈರಲ್

ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳನ್ನು ಗುಜರಾತ್ ಚುನಾವಣೆಯಲ್ಲಿ ತೊಡಗಿಸಿಕೊಳ್ಳುವಂತೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಹಿರಂಗವಾಗಿ ಕರೆ ಕೊಟ್ಟಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಮಾನ್ಯತೆ ಮತ್ತು ಪಕ್ಷದ ಚಿಹ್ನೆಯನ್ನು ರದ್ದುಗೊಳಿಸಬೇಕೆಂದು ಕೇಂದ್ರ ಚುನಾವಣಾ ಆಯೋಗದ ಕಮಿಷನರ್ ರಾಜೀವ್ ಕುಮಾರ್ ಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಚುನಾವಣಾ ಆಯೋಗಕ್ಕೆ ಬರೆದ ಪತ್ರಕ್ಕೆ ಕರ್ನಾಟಕದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಮದನ್ ಗೋಪಾಲ್, ಕೇರಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆನಂದ್ ಬೋಸ್, ನಿವೃತ್ತ ರಾಯಭಾರಿ ನಿರಂಜನ್ ದೇಸಾಯಿ, ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಉಮೇಶ್ ಕುಮಾರ್ ಸೇರಿದಂತೆ 56 ಮಂದಿ ನಿವೃತ್ತ ಅಧಿಕಾರಿಗಳು ಸಹಿ ಹಾಕಿರುವುದಾಗಿ ವರದಿ ತಿಳಿಸಿದೆ.

“ಕೇಜ್ರಿವಾಲ್ ಅವರು ರಾಜ್ ಕೋಟ್ ನಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಹೇಳಿಕೆ ತಪ್ಪು. ಇದರಿಂದ ಸಾಂವಿಧಾನಿಕ ಗೊಂದಲ ಉಂಟಾಗಲಿದೆ ಎಂಬುದು ನಮ್ಮ ನಂಬಿಕೆಯಾಗಿದೆ. ಒಬ್ಬ ರಾಜ್ಯದ ಮುಖ್ಯಮಂತ್ರಿಯಾಗಿ ಇಂತಹ ವಿವಾದಿತ ಹೇಳಿಕೆ ನೀಡುವುದನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮದನ್ ಗೋಪಾಲ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next