Advertisement

ದೇಶದ ಒಳಿತಿಗಾಗಿ ರಾಜ್ಯಸಭಾ ಸದಸ್ಯತ್ವಕ್ಕೆ ಸಮ್ಮತಿ : ಗೊಗೋಯ್‌ ಸ್ಪಷ್ಟನೆ

09:58 AM Mar 18, 2020 | Hari Prasad |

ಗುವಾಹಾಟಿ: ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ನ್ಯಾಯಾಂಗ ಮತ್ತು ಶಾಸಕಾಂಗಗಳು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದ್ದು, ಇದೇ ಕಾರಣದಿಂದಲೇ ತಾವು ರಾಜ್ಯಸಭಾ ಸದಸ್ಯತ್ವಕ್ಕೆ ಒಪ್ಪಿಗೆ ಸೂಚಿಸಿರುವುದಾಗಿ ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಸ್ಪಷ್ಟಪಡಿಸಿದ್ದಾರೆ.

Advertisement

ನ್ಯಾ| ಗೊಗೋಯ್‌ ಹಾಗೂ ಕೇಂದ್ರ ಸರಕಾರದ ವಿರುದ್ಧ ವ್ಯಾಪಕ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ‘ನ್ಯಾಯಾಂಗಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳನ್ನು ಶಾಸಕಾಂಗದ ಗಮನಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಸಭೆಯಲ್ಲಿ ನನ್ನ ಉಪಸ್ಥಿತಿ ಪ್ರಮುಖ ಪಾತ್ರ ವಹಿಸಲಿದೆ ಎಂಬುದು ನನ್ನ ನಂಬಿಕೆ’ ಎಂದು ಅವರು ತಿಳಿಸಿದ್ದಾರೆ.

ನ್ಯಾ| ಗೊಗೋಯ್‌ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ ನಿರ್ಧಾರ ಹಾಗೂ ಅವರು ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದಕ್ಕೆ ಕಾಂಗ್ರೆಸ್‌ ಸೇರಿ ವಿವಿಧ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದೊಂದು ‘ಲಜ್ಜೆಗೆಟ್ಟ ನಿರ್ಧಾರ’ ಎಂದು ಟೀಕಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next