Advertisement

2 ಕ್ಷೇತ್ರಗಳ ಉಪಚುನಾವಣೆಯಲ್ಲಿ ಅಭ್ಯರ್ಥಿ ಕಣಕ್ಕೆ : ಎಚ್‍ಡಿಕೆ

08:05 PM Mar 21, 2021 | Team Udayavani |

ರಾಮನಗರ: ಮಸ್ಕಿ ಹಾಗೂ ಬಸವ ಕಲ್ಯಾಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯ ರ್ಥಿಗಳನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಹೇಳಿದರು.

Advertisement

ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿ ಸಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಕೊರೊನಾ ನಿಯಮ ಅನ್ವ ಯ ವಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಚುನಾವಣೆಗೆ ಕೊರೊನಾ ಬರುವುದಿಲ್ಲವೇ ಎಂದು ವ್ಯಂಗ್ಯ ವಾಡಿದರು.

ಕೊರೊನಾ ನಿಯಂತ್ರಿ ಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ನಿಯಮಗಳನ್ನು ರೂಪಿಸುತ್ತದೆ. ಈಗ ಚುನಾವ ಣೆಗೆ ನಿಯಮಗಳು ಅನ್ವಯವಾಗುವುದಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ಚುನಾವಣೆಗೆ ಕೊರೊನಾ ಹೆದರಿ ಓಡಿ ಹೋಗುತ್ತದೆಯೇ ಎಂದರು.

ಪ್ರತಿ ಹಂತದಲ್ಲಿಯೂ ಅನಾಹುತ ಆಗದಂತೆ ಸೂಕ್ತ ತೀರ್ಮಾನ ತೆಗೆದುಕೊಂಡು ನಿಯಮಗಳನ್ನು ರೂಪಿ ಸಿ ಅನುಷ್ಠಾನಕ್ಕೆ ತರಬೇಕು. ಆದರೆ, ನಮಗೆ ಬೇಕಾದಂತೆ ನಿಯಮಗಳನ್ನು ಮಾರ್ಪಾಡು ಮಾಡಿಕೊಳ್ಳ ಬಾ ರದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next