Advertisement

ನಾಲಗೆ ಕತ್ತರಿಸಿದರೆ 5 ಲ.ರೂ.!

10:40 AM Sep 08, 2018 | Team Udayavani |

ಹೊಸದಿಲ್ಲಿ: ಯುವತಿಯರನ್ನು ಅಪಹರಿಸುತ್ತೇನೆ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಗ್ರಾಸವಾಗಿದ್ದ ಬಿಜೆಪಿ ಶಾಸಕ ರಾಮ್‌ ಕದಮ್‌ರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ನಾಯಕ, ಮಹಾರಾಷ್ಟ್ರದ ಮಾಜಿ ಸಚಿವ ಸುಭೋದ್‌ ಸವೋಜಿ ವಿವಾದವೊಂದನ್ನು ಮೈಮೇಲೆಳೆದುಕೊಂಡಿದ್ದಾರೆ. ರಾಮ್‌ ಕದಮ್‌ ನಾಲಗೆ ಕತ್ತರಿಸಿ ತಂದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ  ನೀಡಿದ್ದ ಸಂದರ್ಶನದ ವೇಳೆ ಸುಭೋದ್‌, ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಕದಮ್‌ ವಿರುದ್ಧ ಸಾಮಾಜಿಕ ಕಾರ್ಯಕರ್ತೆಯೊಬ್ಬರು ದೂರು ದಾಖಲಿಸಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next