Advertisement

ಈಶ್ವರಪ್ಪ ಶಿಷ್ಯ,ಮಾಜಿ ಮೇಯರ್ ವೆಂಕಟೇಶ್ ಗೆ ಬಿಜೆಪಿಯಿಂದ ಗೇಟ್ ಪಾಸ್

03:30 PM Jan 10, 2017 | Sharanya Alva |

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಮೇಲ್ಮನೆ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ನಡುವಿನ ಜಂಗೀಕುಸ್ತಿ ಮತ್ತೆ ಮುಂದುವರಿದಿದ್ದು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಜೊತೆ ಗುರುತಿಸಿಕೊಂಡಿದ್ದ ಬಿಜೆಪಿ ಮುಖಂಡ, ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

Advertisement

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಬಿಬಿಎಂಪಿಯ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಪಕ್ಷದಿಂದ ಅಮಾನತುಗೊಳಿಸಿ ಬೆಂಗಳೂರು ಬಿಜೆಪಿ ಘಟಕದ ಅಧ್ಯಕ್ಷ ಸದಾಶಿವ ಅವರು ಆದೇಶ ಹೊರಡಿಸಿದ್ದಾರೆ.

ವೆಂಕಟೇಶ್ ಮೂರ್ತಿ ಅವರನ್ನು ಅಮಾನತುಗೊಳಿಸುವ ಮೂಲಕ ಈಶ್ವರಪ್ಪ ಬಣಕ್ಕೆ ಬಿಎಸ್ ವೈ ಅವರು ಬಿಸಿ ಮುಟ್ಟಿಸಿದ್ದಾರೆ. ಬಿಎಸ್ ವೈ ಅವರನ್ನು ಸಿಎಂ ಮಾಡುವ ಉದ್ದೇಶ ರಾಯಣ್ಣ ಬ್ರಿಗೇಡ್ ಗೆ ಇಲ್ಲ. ಅವರನ್ನು ಸಿಎಂ ಆಗಿ ರಾಜ್ಯದ ಜನರೇ ಆಯ್ಕೆ ಮಾಡುತ್ತಾರೆಂದು ಹೇಳಿರುವುದಾಗಿ ಕೆಎಸ್ ಈಶ್ವರಪ್ಪ ಮಂಗಳವಾರ ಕಲಬುರಗಿಯಲ್ಲಿ ಮಾತನಾಡುತ್ತ ತಿಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next