Advertisement

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

06:14 PM Jul 08, 2024 | Team Udayavani |

ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಸೋಮವಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಜಿ‌. ಪ್ರತಾಪ್ ಕುಮಾರ್ (42) ಆತ್ಮಹತ್ಯೆ ಮಾಡಿಕೊಂಡವರು. ಬಿ.ಸಿ. ಪಾಟೀಲ್ ಅವರ ಮೊದಲ ಪುತ್ರಿ ಸೌಮ್ಯ ಅವರನ್ನು ಪ್ರತಾಪ್ ಕುಮಾರ್ ವಿವಾಹವಾಗಿದ್ದರು.

Advertisement

ಹಿರೇಕೆರೂರ್ ನಿಂದ ಶಿವಮೊಗ್ಗಕ್ಕೆ ತೆರಳುತ್ತಿ ದ್ದ ಅವರು ಹೊನ್ನಾಳಿ ಸಮೀಪದ ಅರಕೆರೆ ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ವಿಷ ಸೇವಿಸಿದ ಅಸ್ವಸ್ಥರಾಗಿದ್ದ ಅವರನ್ನು ಕಂಡಂತಹವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.‌ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಪ್ರತಾಪ್ ಕುಮಾರ್ ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಂತರವೇ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊನ್ನಾಳಿ ಪೊಲೀಸರು ಅರಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯೇಂದ್ರ ಸಾಂತ್ವನ

ಶಿವಮೊಗ್ಗ ಮೆಗ್ಗಾನ್ ಶವಗಾರಕ್ಕೆ ಬಿ.ಸಿ.ಪಾಟೀಲ್ ಅವರು ಆಗಮಿಸಿ ಪೊಲೀಸರ ಬಳಿ ಮಾಹಿತಿ ಪಡೆದುಕೊಂಡರು. ಸಂಬಂಧಿಕರು ಪ್ರತಾಪ್ ಕುಮಾರ್ ಮೃತದೇಹ ಕಂಡು ಕಣ್ಣೀರು ಹಾಕುತ್ತಿದ್ದಾರೆ. ಬಿ.ಸಿ.ಪಾಟೀಲ್‌ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ರಾಘವೇಂದ್ರ, ಮಾಜಿ ಸಚಿವ ರೇಣುಕಾಚಾರ್ಯ ಅವರು ಸಾಂತ್ವನ ಹೇಳಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next