Advertisement

Valmiki Corporation scam; ಮಾಜಿ ಸಚಿವ ನಾಗೇಂದ್ರ ಗೆ 14 ದಿನಗಳ ನ್ಯಾಯಾಂಗ ಬಂಧನ

06:45 PM Jul 22, 2024 | Team Udayavani |

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

ಜಾರಿ ನಿರ್ದೇಶನಾಲಯದ (ED) ಕಸ್ಟಡಿ ಇಂದು ಅಂತ್ಯಗೊಳ್ಳುತ್ತಿದ್ದಂತೆ ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿ ಜುಲೈ 12 ರಂದು ನಾಗೇಂದ್ರ ಬಂಧಿಸಿ ತೀವ್ರ ವಿಚಾರಣೆ ನಡೆಸಿರುವ ಇಡಿ ಹೆಚ್ಚಿನ ಕಸ್ಟಡಿಯನ್ನು ಕೋರಲಿಲ್ಲ.ನಾಗೇಂದ್ರ ಅವರನ್ನು ಬಿಗಿ ಭದ್ರತೆಯ ನಡುವೆ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.

ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿ ಹೈದರಾಬಾದ್ ನ ಸತ್ಯನಾರಾಯಣ ವರ್ಮ ಅವರನ್ನು ನಾಳೆ (ಮಂಗಳವಾರ) ಕೋರ್ಟ್ ಗೆ ಹಾಜರು ಪಡಿಸುವಂತೆ ನ್ಯಾಯಾಧೀಶರು ಆದೇಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next