Advertisement

ಮಹದಾಯಿಗಾಗಿ ಪ್ರಧಾನಿ ಮೋದಿ ಭೇಟಿ ಅರ್ಥವಿಲ್ಲದ್ದು: ಕೋನರಡ್ಡಿ

08:05 PM Feb 02, 2021 | Team Udayavani |

ಧಾರವಾಡ: ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ಅಡ್ಡಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಗೆ ಹೋಗುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಹೇಳಿರುವುದಲ್ಲಿ ಯಾವುದೇ ಅರ್ಥವಿಲ್ಲ ಎಂದು ನವಲಗುಂದದ ಮಾಜಿ ಶಾಸಕ ಎನ್‌.ಹೆಚ್‌. ಕೋನರಡ್ಡಿ ಹೇಳಿದರು.

Advertisement

ಇದನ್ನೂ ಓದಿ :

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧಿಕರಣ ಹಾಗೂ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಬದ್ಧ ಎಂದು ಹೇಳಿದ ಗೋವಾ ಸರ್ಕಾರ ಮತ್ತೆ ವಿಧಾನಸಭೆಯಲ್ಲಿ ಪ್ರಧಾನಮಂತ್ರಿ ಬಳಿ ನಿಯೋಗ ಕೊಂಡೊಯ್ಯುವುದಾಗಿ ಹೇಳಿಕೆ ನೀಡಿದ್ದಕ್ಕೆ ಕರ್ನಾಟಕ ಯಾವುದೇ ಮಹತ್ವ ನೀಡುವ ಅವಶ್ಯಕತೆಯಿಲ್ಲ. ಮಹದಾಯಿ ವಿಚಾರವಾಗಿ ಈಗಾಗಲೇ ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರ ತಕ್ಷಣ ಯೋಜನೆ ಕಾಮಗಾರಿ ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next