Advertisement

ಎಂ.ಪಿ.ಪ್ರಕಾಶ್‌ ಪುತ್ರ, ಮಾಜಿ ಶಾಸಕ ಎಂ.ಪಿ.ರವೀಂದ್ರ ಇನ್ನಿಲ್ಲ 

12:14 PM Nov 03, 2018 | |

ಬೆಂಗಳೂರು: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹರಪ್ಪನಹಳ್ಳಿ ಯ ಮಾಜಿ ಕಾಂಗ್ರೆಸ್‌ ಶಾಸಕ ಎಂ.ಪಿ.ರವೀಂದ್ರ ಅವರು ಶನಿವಾರ ನಸುಕಿನ 3.30 ರ ವೇಳೆಗೆ ಬಹು ಅಂಗಾಂಗ ವೈಫ‌ಲ್ಯದಿಂದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

Advertisement

ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್‌ ಅವರ ಪುತ್ರರಾಗಿದ್ದ ರವೀಂದ್ರ ಅವರು 2013 ರಲ್ಲಿ ಹರಪ್ಪನ ಹಳ್ಳಿ ಕ್ಷೇತ್ರದಿಂದ ಜಯಗಳಿಸಿದ್ದರು. 

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಸೇರಿದಂತೆ ಗಣ್ಯರು ರವೀಂದ್ರ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಭಾನುವಾರ ಮಧ್ಯಾಹ್ನ ಹೂವಿನ ಹಡಗಲಿಯಲ್ಲಿ ರವೀಂದ್ರ ಅವರ ಅಂತ್ಯಕ್ರಿಯೆ ನಡೆಯಲಿದೆ. 

ಸಹಕಾರಿ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರವೀಂದ್ರ ತಮ್ಮ ತಂದೆ ಎಂ.ಪಿ. ಪ್ರಕಾಶ್‌ ನಿಧನದ ಬಳಿಕ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟರು. 2013ರ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದ ರವೀಂದ್ರ 56,954 ಮತಗಳನ್ನು ಪಡೆದು ಬಿಜೆಪಿಯ ಗಣಿಧಣಿ ಜಿ.ಕರುಣಾಕರರೆಡ್ಡಿ ಅವರನ್ನು ಸೋಲಿಸುವ ಮೂಲಕ ಪ್ರಥಮ ಬಾರಿಗೆ ವಿಧಾನಸೌಧ ಪ್ರವೇಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next