Advertisement

ಪಕ್ಷೇತರ ಅಭ್ಯರ್ಥಿಯಾಗಿ ಖೂಬಾ ನಾಮಪತ್ರ ಸಲ್ಲಿಕೆ

09:29 PM Mar 31, 2021 | Team Udayavani |

ಬಸವಕಲ್ಯಾಣ: ಬಿಜೆಪಿಯಿಂದ ಟಿಕೆಟ್‌ ಕೈಬಿಟ್ಟಿರುವುದಕ್ಕೆ ಅಸಮಾಧಾನ ಗೊಂಡಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮಂಗಳವಾರ ಬಂಡಾಯ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ.

Advertisement

ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಸ್ವಾಭಿಮಾನಿಗಳ ಸಮಾವೇಶ ನಡೆಸಿದ ಖೂಬಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದರು.

ಬಳಿಕ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ನೇರವಾಗಿ ಅಂಬೇಡ್ಕರ್‌ ವೃತ್ತಕ್ಕೆ ತೆರಳಿ ಮಾಲಾರ್ಪಣೆ ಮಾಡಿ ನಂತರ ಮಿನಿ ವಿಧಾನಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಸಹಾಯಕ ಆಯುಕ್ತ ಭುವನೇಶ ಪಾಟೀಲ ನಾಮಪತ್ರ ಸ್ವೀಕರಿಸಿದರು. ಕಾಳಿದಾಸ ಜಾಧವ ಸೇರಿದಂತೆ ಇಬ್ಬರು ಖೂಬಾ ಅವರಿಗೆ ಸಾಥ್‌ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next