Advertisement

ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧ‌ನ

01:11 PM Aug 07, 2021 | Team Udayavani |

ಹಾವೇರಿ: ಶಿಗ್ಗಾವಿ-ಸವಣೂರು ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ (58 ವ) ಶನಿವಾರ ನಿಧನರಾದರು.

Advertisement

ಮೃತರಿಗೆ ಪತ್ನಿ, ಓರ್ವ ಪುತ್ರ-ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ. ಮೃತರ ಅಂತ್ಯಕ್ರಿಯೆ ಸವಣೂರಿನ ವೀರಶೈವರುದ್ರಭೂಮಿಯಲ್ಲಿ ಶನಿವಾರ ಸಂಜೆ ಜರುಗುಲಿದೆ ಎಂದು ಮೂಲಗಳು ತಿಳಿಸಿವೆ.

ರಾಜಶೇಖರ ಸಿಂದೂರ ಅವರು 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.

ಮುಖ್ಯಮಂತ್ರಿ ಸಂತಾಪ: ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಶಸ್ವಿ ಉದ್ಯಮಿಯೂ ಆಗಿದ್ದ ಸಿಂಧೂರ ಅವರು ಸರಳ, ಸಜ್ಜನ ಜನಾನುರಾಗಿ ಶಾಸಕರಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.  ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸು ವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಬದಲಾವಣೆ ತರುವ ನಿಟ್ಟಿನಲ್ಲಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ: ಸಿಎಂ ಬೊಮ್ಮಾಯಿ

Advertisement

ಸಿಂಧೂರ ಅವರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ಸವಣೂರಿಗೆ ಆಗಮಿಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next