Advertisement

ಜೆಡಿಎಸ್ ಗೆ ಗುಡ್ ಬೈ ಹೇಳಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು

11:05 AM Mar 08, 2020 | keerthan |

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ಅವರು ಪಕ್ಷ ತೊರೆದಿದ್ದಾರೆ. ಶನಿವಾರ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದರೂ ಒಂದು ಪೂರ್ಣ ಅವಧಿಗೆ ವಿಧಾನಪರಿಷತ್ತಿನ ಸದಸ್ಯನಾಗಿ ಕಾರ್ಯನಿರ್ವಹಿಸುವ ಅವಕಾಶ ದೊರೆಯಲಿಲ್ಲ ಮತ್ತು ಇತರ ಕಾರಣಗಳಿಂದ ತಾನು ರಾಜೀನಾಮೆ ನೀಡುತ್ತಿರುವುದಾಗಿ ರಮೇಶ್ ಬಾಬು ಅವರು ಬಿಡುಗಡೆ ಮಾಡಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಪ್ರವೇಶ ಬಯಸಿದ್ದ ರಮೇಶ್ ಬಾಬುಗೆ ಜೆಡಿಎಸ್ ಟಿಕೆಟ್ ನೀಡಿರಲಿಲ್ಲ. ಇದರಿಂದ ಬೇಸತ್ತಿರುವ ಅವರು ಪಕ್ಷದ ವರಿಷ್ಠ ಎಚ್ ಡಿ ದೇವೆಗೌಡರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ಧಾರೆ.

ಇತ್ತೀಚೆಗಷ್ಟೇ ಮತ್ತೋರ್ವ ಎಂಎಲ್ ಸಿ ಪುಟ್ಟಣ್ಣ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಸದ್ಯ ರಮೇಶ್ ಬಾಬು ಅವರು ರಾಜೀನಾಮೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮಧು ಬಂಗಾರಪ್ಪ ಅಸಮಧಾನ ವ್ಯಕ್ತಪಡಿಸಿದ್ದರು.

ಇಂದು ದಾವಣಗೆರೆಯಲ್ಲಿ ರಮೇಶ್ ಬಾಬು ಅವರು ಸುದ್ದಿಗೋಷ್ಠಿ ಕರೆದಿದ್ದು, ತಮ್ಮ ಮುಂದಿನ ನಡೆಯ ಬಗ್ಗೆ ಬಹಿರಂಗಪಡಿಸುವ ಸಾಧ್ಯತೆಯಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next