Advertisement

ತ್ರಿಪುರಾ ಮಾಜಿ ಸಿಎಂ ಬಿಪ್ಲಬ್ ದೇಬ್ ಕಾರು ಅಪಘಾತ

09:22 PM Feb 20, 2023 | Team Udayavani |

ಹರಿಯಾಣ: ತ್ರಿಪುರಾ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯಸಭಾ ಸಂಸದ ಬಿಪ್ಲಬ್ ಕುಮಾರ್ ದೇಬ್ ಅವರ ಕಾರು ಸೋಮವಾರ ಹರಿಯಾಣದ ಪಾಣಿಪತ್‌ನ ಜಿಟಿ ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಹರಿಯಾಣದ ಬಿಜೆಪಿ ರಾಜ್ಯ ಉಸ್ತುವಾರಿಯೂ ಆಗಿರುವ ದೇಬ್ ಅವರು ದೆಹಲಿಯಿಂದ ಚಂಡೀಗಢಕ್ಕೆ ಹೋಗುತ್ತಿದ್ದಾಗ ಸಮ್ಲಾಖಾ ಮತ್ತು ಪಾಣಿಪತ್ ನಡುವಿನ ಜಿಟಿ ರಸ್ತೆಯಲ್ಲಿ ನಿಂತಿದ್ದ ವಾಹನಕ್ಕೆ ಅವರ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್, ತ್ರಿಪುರ ಮಾಜಿ ಮುಖ್ಯಮಂತ್ರಿ ಅವರ ಕಾರು ಅಪಘಾತವಾಗಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. “ಟೈರ್ ಪಂಕ್ಚರ್ ಆದ ಕಾರೊಂದು ಜಿಟಿ ರಸ್ತೆಯಲ್ಲಿ ನಿಂತಿತ್ತು ಈ ವೇಳೆ ಹಿಂದಿನಿಂದ ಬಂದ ದೇಬ್ ಅವರ ವಾಹನವು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಧಿಕಾರಿಗಳು ತಪಾಸಣೆಗೆ ಬಂದರೆಂದು ಜೈಲಿನೊಳಗೆ ಮೊಬೈಲ್ ನುಂಗಿದ ಕೈದಿ…

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next