Advertisement

ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕೆ ಕಾಯೋಣ: ಬಿಜೆಪಿ ಬೆಳವಣಿಗೆ ಬಗ್ಗೆ ಯೋಗೇಶ್ವರ್

04:29 PM Jun 25, 2021 | Team Udayavani |

ಬೆಂಗಳೂರು: ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಹೇಳಿದ್ದೇವೆ. ಪರೀಕ್ಷೆ ಬರೆದಿದ್ದೇವೆ. ಫಲಿತಾಂಶಕ್ಕಾಗಿ ಕಾಯೋಣ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದೇವೆ. ವರಿಷ್ಠರು ಪರಿಹಾರ ನೀಡುವ ಭರವಸೆ ನಮಗಿದೆ. ನನ್ನ ಇಲಾಖೆಗೆ ಇರುವ ಹಣಕಾಸಿನ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:ಮುಂದಿನ ವಾರದಿಂದ ಪ್ರವಾಸೋದ್ಯಮಕ್ಕೆ ಅವಕಾಶ: ಸಚಿವ ಯೋಗೇಶ್ವರ್

ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ ಬಗ್ಗೆ ಮಾತನಾಡಿದ ಯೋಗೇಶ್ವರ್, ಅವರ ಹೇಳಿಕೆ ಬಗ್ಗೆ ಗೊತ್ತಿಲ್ಲ. ಅವರು ನನ್ನ ವೈಯಕ್ತಿಕ ಸ್ನೇಹಿತರು. ಅವರ ಸಮಸ್ಯೆ ಏನು ಅಂತ ಕೇಳಿಲ್ಲ. ಅವರು ರಾಜಿನಾಮೆ ಕೊಡುವುದಿಲ್ಲ ಅನ್ನುವ ನಂಬಿಕೆಯಿದೆ ಎಂದರು.

ನಾವು ಹೊಂದಾಣಿಕೆ ರಾಜಕಾರಣ ಮಾಡುವುದು ಬೇಡ ಎಂದು ಹೇಳಿದ್ದೇವೆ. ಹೈಕಮಾಂಡ್ ನಮ್ಮ ಬೇಡಿಕೆ ಪರಿಗಣಿಸುವ ವಿಶ್ವಾಸ ಇದೆ ಎಂದು ಸಚಿವ ಯೋಗಶ್ವರ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next