Advertisement

ಬೆಂಗಳೂರು: ಕೋವಿಡ್ದಿಂದಾಗಿ ತರಗತಿ ಆರಂಭವಾಗಿಲ್ಲವಾದರೂ ಈ ವರ್ಷ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

Advertisement

ಕಳೆದ ಶೈಕ್ಷಣಿಕ ವರ್ಷದ ಅಂತ್ಯದ ವೇಳೆ ಕೋವಿಡ್ ಕಾಣಿಸಿ ಕೊಂಡು, ಬಳಿಕ ಲಾಕ್‌ಡೌನ್‌ ಘೋಷಣೆಯಾಗಿತ್ತು. 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ನಡೆದಿರಲಿಲ್ಲ.

ಈ ವರ್ಷ 1ರಿಂದ 9ನೇ ತರಗತಿ ವಿದ್ಯಾರ್ಥಿ ಗಳಿಗೆ ತರಗತಿ ಬೋಧನೆ ಆರಂಭವಾಗಿಲ್ಲ. 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಾರಕ್ಕೆ 3 ದಿನ ವಿದ್ಯಾಗಮ ತರಗತಿ ನಡೆಯುತ್ತಿದೆ. ಯಾವುದೇ ತರಗತಿ ಪಠ್ಯದ ಕಡಿತವೂ ಆಗಿಲ್ಲ.

ಈ ಬಾರಿ ಎಲ್ಲ ಶೈಕ್ಷಣಿಕ ಪ್ರಕ್ರಿಯೆಗಳ ಜತೆಗೆ ಪರೀಕ್ಷೆ ನಡೆಸಬೇಕು ಎಂದು ಈಗಾಗಲೇ ಶಾಲೆಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಪರೀಕ್ಷೆ ನಡೆಸಿ ತೇರ್ಗಡೆ :

Advertisement

ಶಿಕ್ಷಣ ಹಕ್ಕು ಕಾಯ್ದೆಯನ್ವಯ 1-9ರ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವಂತಿಲ್ಲ. ಹೀಗಾಗಿ ಪರೀಕ್ಷೆ ನಡೆಸಿ, ಎಲ್ಲರನ್ನೂ ತೇರ್ಗಡೆ ಮಾಡಿ, ಕಲಿಕಾ ನ್ಯೂನತೆ ಆಧಾರದಲ್ಲಿ ಮುಂದೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಮುಖ್ಯ ಶಿಕ್ಷಕರೊಬ್ಬರು ಮಾಹಿತಿ ನೀಡಿದ್ದಾರೆ.

ಖಾಸಗಿ ಶುಲ್ಕ ವಿನಾಯಿತಿ? :

ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ ಶಾಲಾ ಮಕ್ಕಳ ಶುಲ್ಕದಲ್ಲಿ ಶೇ. 30ರಿಂದ ಶೇ. 35ರಷ್ಟು ವಿನಾಯಿತಿ ನೀಡಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಸೂಚನೆ ನೀಡುವ ಸಾಧ್ಯತೆಯಿದೆ. ಸೋಮವಾರ ಅಥವಾ ಮಂಗಳವಾರ ಸರಕಾರ  ಈ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

1ರಿಂದ 9ನೇ ತರಗತಿ ಮಕ್ಕಳಿಗೆ ಈ ಬಾರಿ ಕಲಿಕಾ ಮೌಲ್ಯ ಮಾಪನ ಇರಲಿದೆ. ದ.ಕ. ಜಿಲ್ಲೆಯಲ್ಲಿ ಸಿದ್ಧತೆ ನಡೆಯುತ್ತಿದೆ. ವಿದ್ಯಾಗಮ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಲಾಗುತ್ತಿದೆ. -ಮಲ್ಲೇಸ್ವಾಮಿ, ವಿದ್ಯಾಂಗ ಉಪನಿರ್ದೇಶಕರು, ದ.ಕ.

ಉಡುಪಿ ಜಿಲ್ಲೆಯಲ್ಲಿ ವಿದ್ಯಾಗಮಕ್ಕೆ ಶೇ.75ರಷ್ಟು ಮಂದಿ ಮಕ್ಕಳು ಹಾಜರಾಗುತ್ತಿದ್ದಾರೆ. 1ರಿಂದ 9ನೇ ತರಗತಿಯ ಮಕ್ಕಳಿಗೆ ಈ ಬಾರಿ ಕಲಿಕಾ ಮೌಲ್ಯಮಾಪನ ಇರಲಿದೆ. -ಎನ್‌.ಎಚ್‌. ನಾಗೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಡುಪಿ

 

 

Advertisement

Udayavani is now on Telegram. Click here to join our channel and stay updated with the latest news.

Next