Advertisement

ವಲಸೆ ಕಾರ್ಮಿಕರ ಮಕ್ಕಳಿಗೆ ಇದ್ದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ

09:26 PM May 31, 2020 | sudhir |

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಾಗಿರುವ ವಲಸೆ ಕಾರ್ಮಿಕರ ಮಕ್ಕಳು ಈಗ ಇರುವ ಊರು, ಜಿಲ್ಲೆಗಳಿಂದಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು.

Advertisement

ಚಿತ್ರದುರ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ಹಾಸ್ಟೆಲ್‌ಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಕೆ ಮಾಡಿಕೊಂಡಿರುವುದರಿಂದ ಮಕ್ಕಳಿಗೆ ಸಮಸ್ಯೆ ಆಗುತ್ತದೆ. ಈ ಕಾರಣಕ್ಕೆ ಅವರ ಊರುಗಳಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅನುಕೂಲ ಆಗುವಂತೆ ಹಾಲ್‌ಟಿಕೇಟ್ ನೀಡುತ್ತಿದ್ದೇವೆ ಎಂದರು.

ಪರೀಕ್ಷಾ ಕೇಂದ್ರಗಳಿರುವ ಪ್ರದೇಶ ಕಂಟೈನ್ಮೆಂಟ್ ಪ್ರದೇಶದ ವ್ಯಾಪ್ತಿಗೆ ಸೇರಿದರೆ ಆ ಕೇಂದ್ರದ ಮಕ್ಕಳಿಗೆ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷಾ ಸಂದರ್ಭದಲ್ಲಿ ಅವಕಾಶ ಕಲ್ಪಿಸಲಾಗುವುದು. ಒಂದು ವೇಳೆ ವಿದ್ಯಾರ್ಥಿ ಇರುವ ಪ್ರದೇಶವೇ ಕಂಟೈನ್ಮೆಂಟ್ ಜೋನ್ ಆದರೆ ಅವರಿಗೂ ಜುಲೈನಲ್ಲಿ ಅವಕಾಶ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.

ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡುತ್ತಿದ್ದು, ಹಲವು ಸಂಘ ಸಂಸ್ಥೆಗಳು ಪರೀಕ್ಷೆ ಬರೆಯುತ್ತಿರುವ ಎಲ್ಲಾ ಮಕ್ಕಳಿಗೂ ಮಾಸ್ಕ್ ಸ್ಯಾನಿಟೈಸರ್ ವ್ಯವಸ್ಥೆ ಮಾಡುತ್ತಿದ್ದೇವೆ. ಪರೀಕ್ಷಾ ಕೇಂದ್ರಕ್ಕೆ ಬರುವ ಮಕ್ಕಳಿಗೆ ಅಸೌಖ್ಯವಾದರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಎಲ್ಲಾ ಕೇಂದ್ರಗಳಲ್ಲಿ ಎರಡು ಹೆಚ್ಚುವರಿ ಕೊಠಡಿ ಸಿದ್ಧವಾಗಿಟ್ಟುಕೊಳ್ಳುತ್ತಿದ್ದೇವೆ ಎಂದರು.

ಕಾಸರಗೋಡಿನಲ್ಲಿ ಪ್ರತ್ಯೇಕ ಪರೀಕ್ಷಾ ಕೇಂದ್ರ
ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ಅವರಿರುವ ಊರುಗಳಲ್ಲಿರುವ ಕೇಂದ್ರಗಳಲ್ಲೇ ಇಂಗ್ಲೀಶ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತಿದೆ.

Advertisement

ಕಾಸರಗೋಡಿನಲ್ಲಿ ಸುಮಾರು 1200 ಮಕ್ಕಳು ಪಿಯುಸಿ ಪರೀಕ್ಷೆ ಬರೆಯುವವರಿದ್ದು, ಅಲ್ಲಿಯೇ ಪ್ರತ್ಯೇಕ ಕೇಂದ್ರ ತೆರೆದು ಪರೀಕ್ಷೆ ಬರೆಸಲು ತೀರ್ಮಾನಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆನ್‌ಲೈನ್ ತರಗತಿಗೆ 6 ವರ್ಷ ದಾಟಿದ್ದರೆ ಸೂಕ್ತ
ಶೈಕ್ಷಣಿಕ ವರ್ಷ ಯಾವಾಗ ಆರಂಭಿಸಬೇಕು, ತರಗತಿ ಹೇಗೆ ನಡೆಸಬೇಕು, ದಿನಬಿಟ್ಟು ದಿನ ತರಗತಿಯಾ ಅಥವಾ ಶಿಫ್ಟ್ ಒಳ್ಳೆಯದಾ, ಬೋಧನಾ ರೀತಿ ಹೇಗಿರಬೇಕು ಎಂಬಿತ್ಯಾದಿ ಹಲವು ವಿಷಯಗಳ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ.

ಈ ನಡುವೆ ಆನ್‌ಲೈನ್ ತರಗತಿ ಬಗ್ಗೆ ಈಗ ಹೆಚ್ಚು ಕೇಳುತ್ತಿದ್ದೇವೆ. ಯಾವ ಹಂತದ ಮಕ್ಕಳಿಗೆ ಆನ್‌ಲೈನ್ ಸೂಕ್ತ ಎನ್ನುವ ಬಗ್ಗೆ ಅಧ್ಯಯನ ವರದಿ ನೀಡುವಂತೆ ನಿಮ್ಹಾನ್ಸ್ ಸಂಸ್ಥೆಗೆ ಮನವಿ ಮಾಡಿದ್ದೆವು. ಅವರ ಅಭಿಪ್ರಾಯದಲ್ಲಿ 6 ವರ್ಷದವರೆಗೆ ಆನ್‌ಲೈನ್ ಪಾಠ ಸೂಕ್ತವಲ್ಲ ಎಂಬ ವಿವರಣೆ ನೀಡಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next