Advertisement

ಬಂದ್ ಹಿನ್ನೆಲೆ : ಇಂದು ನಡೆಯಬೇಕಿದ್ದ ಅಕ್ಕಮಹಾದೇವಿ ವಿವಿ ಪರೀಕ್ಷೆಗಳು ಮುಂದೂಡಿಕೆ

07:58 AM Sep 27, 2021 | Team Udayavani |

ವಿಜಯಪುರ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳು ಭಾರತ್ ಬಂದ್​​ಗೆ ಕರೆ ಕೊಟ್ಟಿವೆ. ಈ ಹಿನ್ನೆಲೆಯಲ್ಲಿ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಇಂದು(ಸೋಮವಾರ) ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Advertisement

ಇಂದು ಅಕ್ಕಮಹಾದೇವಿ ವಿವಿಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ, ಬಿಎಡ್ ಕೋರ್ಸ್‌ಗಳಿಗೆ ಪರೀಕ್ಷೆ ನಡೆಯಬೇಕಿತ್ತು. ಆದ್ರೆ ಬಂದ್ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.

ಇಂದು ನಡೆಯಬೇಕಿದ್ದ ಬಿಎಡ್ ಪರೀಕ್ಷೆಯನ್ನ ನಾಳೆ ನಡೆಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳ ಬಗ್ಗೆ ಶೀಘ್ರದಲ್ಲೇ ನಿರ್ಧರ ಕೈಗೊಳ್ಳಲಾಗುವುದು ಎಂದು  ವಿವಿ ಆಡಳಿತ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next