Advertisement

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

05:15 PM Jul 26, 2024 | Team Udayavani |

ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಹರಿಸಲಾಗಿದ್ದು, ಕಂಪ್ಲಿ – ಗಂಗಾವತಿ ಮಧ್ಯೆ ಇರುವ ಸೇತುವೆ ಮುಳುಗಡೆ ಭೀತಿ ಎದುರಾಗಿದೆ. ಸೇತುವೆ ಮುಳುಗಡೆಗೆ ಇನ್ನರ್ಧ ಅಡಿ ಮಾತ್ರ ಬಾಕಿಯಿರುವ ಹಿನ್ನೆಲೆ ಸಂಚಾರ ನಿರ್ಬಂಧ ಹೇರಲಾಗಿದೆ.

Advertisement

ತುಂಗಭದ್ರಾ ಜಲಾಶಯದಿಂದ ನದಿಗೆ 80 ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಬಿಡುಗಡೆ ಹಿನ್ನೆಲೆ ಕಂಪ್ಲಿ ಪಟ್ಟಣಕ್ಕೆ ಪ್ರವಾಹದ ಭೀತಿ ಎದುರಾಗಿದೆ. ಕಂಪ್ಲಿ – ಗಂಗಾವತಿ ಸಂಪರ್ಕ ಕಡಿತವಾಗಿದೆ.

ನದಿಯಲ್ಲಿನ ತ್ಯಾಜ್ಯವೇ ಸೇತುವೆಗೆ ಕಂಟಕವಾಗಿ ನಿಂತಿದೆ. ಜೆಸಿಬಿ ಮೂಲಕ ಪುರಸಭೆ ಅಧಿಕಾರಿಗಳು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ. ಪ್ರವಾಹ ಎದುರಾದರೆ ಪರಿಸ್ಥಿತಿ ಎದುರಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ.

ಮೀನುಗಾರರ ಮನೆಗಳು, ಕೋಟೆ ಪ್ರದೇಶಕ್ಕೆ ನದಿ ನೀರು ನುಗ್ಗುವ ಸಾಧ್ಯತೆಯಿದೆ. ಅಪಾಯ ಲೆಕ್ಕಿಸದೇ ಕೆಲ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next