Advertisement

ಅಬಕಾರಿ ದಾಳಿ: ಅಕ್ರಮ ಮದ್ಯ ವಶ

07:15 AM Mar 18, 2019 | |

ದೇವನಹಳ್ಳಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯವನ್ನು  ವಶಪಡಿಸಿಕೊಂಡು, ಹಲವರನ್ನು ಬಂಧಿಸಿದ್ದಾರೆ.  

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತ ರವೀಂದ್ರ ಮಾರ್ಗದರ್ಶನದಲ್ಲಿ ಅಬಕಾರಿ ಉಪಅಧೀಕ್ಷಕ‌ ಅವರ ನೇತೃತ್ವದಲ್ಲಿ ಬಾರ್‌ ಮತ್ತು ರೆಸ್ಟೋರಂಟ್‌ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅಕ್ರಮ ಮದ್ಯ ಜಪ್ತಿ ಮಾಡಿಕೊಂಡಿದ್ದಾರೆ. ದೂರುಗಳು ಬಂದ ಕೂಡಲೇ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯುತ್ತಿದ್ದಾರೆ.

ನ್ಯಾಯಸಮ್ಮತ ಚುನಾವಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಕರೀಗೌಡ ಮಾತನಾಡಿ, ಅಬಕಾರಿ ಇಲಾಖೆ ತಂಡಗಳನ್ನು ರಚಿಸಿ ವಿವಿಧ ಕಡೆಗಳಲ್ಲಿ ಅಕ್ರಮ ಮದ್ಯ ಮಾರಾಟದ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ನ್ಯಾಯಸಮ್ಮತ ಚುನಾವಣೆ ನಡೆಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಬಕಾರಿ ಅಕ್ರಮ ದೂರಿನ ಬಗ್ಗೆ ಟೋಲ್‌ ಫ್ರೀ ದೂರವಾಣಿ ಸಂಖ್ಯೆಯನ್ನು ಸಹ ನೀಡಲಾಗಿದೆ ಎಂದರು.  

40 ಜನರ ಬಂಧನ: ಲೋಕಸಭಾ ಚುನಾವಣೆ 2019 ರ ಮಾದರಿ ನೀತಿ ಸಂಹಿತೆ ಜಾರಿ ಆದಗಿನಿಂದ ಇಲ್ಲಿಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 126 ದಾಳಿಗಳನ್ನು ನಡೆಸಿ 58 ಪ್ರಕರಣಗಳನ್ನು ದಾಖಲಿಸಿ 5,456 ಲೀ. ಮಧ್ಯ, 820 ಬಿಯರ್‌ ಹಾಗೂ 3 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಂಡು, 40 ಜನರನ್ನು ಬಂಧಿಸಲಾಗಿದೆ.

ಅಲ್ಲದೇ, ಅವರಿಂದ 52,500 ರೂ. ದಂಡ ವಸೂಲಿ ಮಾಡಲಾಗಿದೆ. 9 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಶಪಡಿಸಿಕೊಂಡ ಮಧ್ಯ ಮತ್ತು ವಾಹನಗಳ ಮೌಲ್ಯ 17,67,483 ರೂ. ಎಂದು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತ ರವೀಂದ್ರ ತಿಳಿಸಿದರು.  

Advertisement

ದೊಡ್ಡಬಳ್ಳಾಪುರ ಟೌನ್‌ನಲ್ಲಿ 16.830 ಲೀ. ಅಕ್ರಮ ಮಧ್ಯ ಜಪ್ತಿ ಮಾಡಿಕೊಂಡು, ಒಂದು ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮುನೇಗೌಡ ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೇವನಹಳ್ಳಿ ತಾಲೂಕಿನ ಮಿಸ್ಟ್‌ ಫ್ಯಾಕ್ಟರಿ ರೆಸ್ಟೋರಂಟ್‌ ಮೇಲೆ ದಾಳಿ ನಡೆಸಿ 3.425 ಲೀ. ಅಕ್ರಮ ಮದ್ಯ ಹಾಗೂ ಬಿಯರ್‌ ವಶಕ್ಕೆ ಪಡೆಯಲಾಗಿದೆ.

ಆರೋಪಿ ಸೂರಜ್‌ನನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ. ಹೊಸಕೋಟೆ ತಾಲೂಕಿನ ಕನರಸನಹಳ್ಳಿ ರಸ್ತೆಯಲ್ಲಿ ಗಸ್ತು ಸಮಯದಲ್ಲಿ 5.220 ಅಕ್ರಮ ಮದ್ಯ ಜಪ್ತಿ ಮಾಡಿ, ಟಿವಿಎಸ್‌ ನ್ಪೋಟ್ಸ್‌ ವಾಹನವನ್ನು ವಶಕ್ಕೆ ಪಡೆದು, ಆರೋಪಿ ಗಂಗಪ್ಪನನ್ನು ಬಂಧಿಸಲಾಗಿದೆ.

ಹೊಸಕೋಟೆ ತಾಲೂಕಿನ ಪಿಳ್ಳಗುಂಪು ಗ್ರಾಮದ ರತ್ನಮ್ಮ ಎಂಬುವರ ಮನೆಯಲ್ಲಿ ಅಬಕಾರಿ ಆಯುಕ್ತ ರವೀಂದ್ರ ಮಾರ್ಗದರ್ಶನದಲ್ಲಿ ಉಪಅಧೀಕ್ಷಕ‌ ಕೆ.ಎಂ.ತಮ್ಮಣ್ಣ ನೇತೃತ್ವದಲ್ಲಿ ದಾಳಿ ನಡೆಸಿ 185 ಲೀ. ಮದ್ಯ ಹಾಗೂ 39 ಲೀ. ಬಿಯರ್‌ ವಶಕ್ಕೆ ಪಡೆದು, ಆರೋಪಿ ರತ್ನಮ್ಮ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next