Advertisement

ಮದ್ಯ ಮಾರಾಟ ಬಂದ್ ಪರಿಣಾಮ ಬೆಳಗಾವಿ ಜೋರಾಗಿದೆ ಕಳ್ಳಬಟ್ಟಿ ಸಾರಾಯಿ: ಅಬಕಾರಿ ಇಲಾಖೆ ದಾಳಿ

01:20 PM Apr 08, 2020 | keerthan |

ಬೆಳಗಾವಿ: ಕೋವಿಡ್-19 ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಆದೇಶ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಲಾಗಿದೆ.

Advertisement

ಮಾರ್ಚ 24 ರಿಂದ ಇಲ್ಲಿಯವರೆಗೆ ನಿರಂತರವಾಗಿ ಅಬಕಾರಿ ದಾಳಿ, ಹಗಲು ರಾತ್ರಿ ಗಸ್ತು, ರಸ್ತೆಗಾವಲು, ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 353 ದಾಳಿಗಳನ್ನು ನಡೆಸಿ, 37 ಅಬಕಾರಿ ಪ್ರಕರಣಗಳನ್ನು ದಾಖಲಿಸಿಕೊಂಡು 21 ಆರೋಪಿಗಳನ್ನು ಬಂಧಿಸಿ ಒಟ್ಟು 22 ಲಕ್ಷ ರೂ ಮೌಲ್ಯದ 12,340 ಅಕ್ರಮ ಮದ್ಯ, 27 ಗೋವಾ ಮದ್ಯ, 40 ಸೇಂಧಿ, 50 ಅಕ್ರಮ ಬೆಲ್ಲದ ಕೊಳೆ,  5,37,900 ಲೀ ಅಕ್ರಮ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಂಡು 25 ದ್ವಿಚಕ್ರ ವಾಹನ ಒಂದು ಆಟೋ ರಿಕ್ಷಾ, 02 ಗೂಡ್ಸ್ ವಾಹನ ( ಒಟ್ಟು 27 ವಾಹನಗಳು) ಜಪ್ತುಪಡಿಸಿಕೊಳ್ಳಲಾಗಿದೆ.

ಕೋವಿಡ್-19 ವೈರಸ್ ಸೋಂಕನ್ನು ತಡೆಗಟ್ಟಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ವಾರ್ತಾ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಒಟ್ಟು 915೦ ಲೀಟರ್ ಸಾನಿಟೈಜರ್‌ನ್ನು ಹಂಚಿಕೆ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತರಾದ ಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next