ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯ ಭಯದ ಪರಿಣಾಮ ಕೇಂದ್ರ ಸರ್ಕಾರ ದಿಢೀರನೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ನಾಲ್ಕು ವರ್ಷದ ಮಗಳನ್ನು ಹತ್ಯೆಗೈದು ತಂದೆ ನೇಣಿಗೆ ಶರಣು
ಕೇಂದ್ರ ಸರ್ಕಾರದ ಈ ನಿರ್ಧಾರ ಭಯದಿಂದ ಮಾಡಿದ್ದಾಗಿದೆ ವಿನಃ, ಹೃದಯಪೂರ್ವಕವಾಗಿ ಅಲ್ಲ. ಈ ವಸೂಲಿ ಸರ್ಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ಉತ್ತರ ದೊರೆಯಲಿದೆ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡುವಂತೆ ಒತ್ತಾಯಿಸಿದ್ದರು ಕ್ರಮ ತೆಗೆದುಕೊಂಡಿರಲಿಲ್ಲ. ಈಗ ಉಪಚುನಾವಣೆಯ ಫಲಿತಾಂಶದ ನಂತರ ದಿಢೀರ್ ಅಬಕಾರಿ ಸುಂಕ ಕಡಿತ ಮಾಡಿದೆ ಎಂದು ಪ್ರಿಯಾಂಕಾ ಆರೋಪಿಸಿದರು.
ಕೇಂದ್ರ ಸರ್ಕಾರ ಬುಧವಾರ ಪೆಟ್ರೋಲ್ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 10 ರೂಪಾಯಿಯಂತೆ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಅಲ್ಲದೇ ಕೆಲವು ರಾಜ್ಯ ಸರ್ಕಾರಗಳು ವ್ಯಾಟ್ ಅನ್ನು ಕಡಿಮೆ ಮಾಡುವ ಮೂಲಕ ವಾಹನ ಸವಾರರಿಗೆ ರಿಲೀಫ್ ನೀಡಿತ್ತು.