Advertisement

ಉಪಕಾರ ಮಾಡಿದವರ ಕೈ ಬಿಡುವುದಿಲ್ಲ: ನಳಿನ್‌

11:40 PM Aug 30, 2019 | Team Udayavani |

ಪುತ್ತೂರು: ಅನರ್ಹ ಶಾಸಕರ ಪ್ರಕರಣ ನ್ಯಾಯಾಲಯದಲ್ಲಿದೆ. ಆದರೆ, ನಮ್ಮ ಪಕ್ಷಕ್ಕೆ ಉಪಕಾರ ಮಾಡಿದ ಯಾರನ್ನೂ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಶುಕ್ರವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸಚಿವ ಸಂಪುಟದಲ್ಲಿ ಅಸಮಾಧಾನಗಳಿಲ್ಲ. ದು:ಖೀಗಳು ನಮ್ಮಲ್ಲಿಲ್ಲ. ಎಲ್ಲರೂ ಸುಖೀಗಳೇ ಆಗಿದ್ದಾರೆ ಎಂದರು.

Advertisement

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸವಾಲುಗಳ ಕುರಿತ ಪ್ರಶ್ನೆಗೆ ಉತ್ತರಿಸಿ, ಸವಾಲುಗಳಿಲ್ಲದಾಗ ವ್ಯಕ್ತಿತ್ವ ಪರೀಕ್ಷೆಗೆ ಒಳಗಾಗುವುದಿಲ್ಲ. ಆದರೆ, ಈಗ ಪಕ್ಷದಲ್ಲಿ ಸವಾಲು, ಅಸಮಾಧಾನ ಇಲ್ಲ. ಕಾಂಗ್ರೆಸ್‌ ಕಾರ್ಯಕರ್ತರು ಮಾತ್ರ ಬಿಜೆಪಿ ಕಾರ್ಯಕರ್ತರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನದ ಮೆಸೇಜ್‌ಗಳನ್ನು ವೈರಲ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next