Advertisement

ಸದಸ್ಯತ್ವ ವಿಸ್ತರಿಸಿ, ಪಕ್ಷ ಬಲಪಡಿಸಿ: ನಳಿನ್‌

11:10 PM Sep 11, 2019 | Lakshmi GovindaRaju |

ಮಂಗಳೂರು: ಹಿರಿಯರ ಹೋರಾಟ ಮತ್ತು ಪರಿಶ್ರಮದ ಫಲವಾಗಿ ಬಿಜೆಪಿ ಇಂದು ಸುವರ್ಣ ಯುಗದಲ್ಲಿದೆ. ಕೇಂದ್ರ ಸರಕಾರ ಕಾಶ್ಮೀರಕ್ಕೆ ನೀಡಲಾಗಿದ್ದ 370 ವಿಧಿಯನ್ವಯ ನೀಡಲಾಗಿದ್ದ ವಿಶೇಷ ಸ್ಥಾನ-ಮಾನವನ್ನು ರದ್ದುಪಡಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ಬುಧವಾರ ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ರಾಮಮಂದಿರ ನಿರ್ಮಾಣ ಸೇರಿದಂತೆ ಇನ್ನೂ ಕೆಲವು ಐತಿಹಾಸಿಕ ತೀರ್ಮಾನಗಳನ್ನು ಮಾಡಲು ಬಾಕಿಯಿದ್ದು, ಅವುಗಳನ್ನು ಸಾಧಿಸುವ ನಿಟ್ಟಿನಲ್ಲಿ ಸದಸ್ಯತ್ವವನ್ನು ವಿಸ್ತರಿಸಿ, ಪಕ್ಷವನ್ನು ಇನ್ನಷ್ಟು ಬಲಪಡಿಸಲು ಪದಾಧಿಕಾರಿಗಳು ಸಹಕರಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next