Advertisement

State Government ಎಲ್ಲರೊಂದಿಗೆ ಚರ್ಚಿಸಿ ಸಂಕಷ್ಟ ಸೂತ್ರ ಸಿದ್ಧಪಡಿಸಿ ಮುನ್ನಡೆಯಲಿ

09:14 PM Oct 02, 2023 | Team Udayavani |

ಮಂಡ್ಯ: ತಮಿಳುನಾಡು ಅಕ್ರಮವಾಗಿ ನೀರಾವರಿ ಪ್ರದೇಶ ವಿಸ್ತರಣೆ ಮಾಡಿಕೊಂಡು ನೀರು ಬಳಕೆ ಮಾಡುತ್ತಿದೆ. ಯಾವ ರಾಜ್ಯ ಎಷ್ಟು ನೀರು ಬಳಕೆ ಮಾಡಿದೆ ಎಂಬ ಮಾಹಿತಿ ಪ್ರತಿನಿತ್ಯ ಸಿಗಲಿದ್ದು, ಇಂತಹ ಅಂಕಿ ಅಂಶಗಳನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಹಾಗೂ ಪ್ರಾ ಧಿಕಾರದ ಗಮನಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ನಗರದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರ ಎಲ್ಲರೊಂದಿಗೆ ಚರ್ಚಿಸಿ ಸರ್ವ ಸಮ್ಮತವಾದ ಸಂಕಷ್ಟ ಸೂತ್ರ ಸಿದ್ಧಪಡಿಸಿ ಮುನ್ನಡೆಯಬೇಕೆಂದು ಹೇಳಿದರು.

ಕಾವೇರಿ ವಿಚಾರವಾಗಿ ನ್ಯಾಯ ಪಡೆಯಲು ಕರ್ನಾಟಕ ಸಂಕಷ್ಟ ಸೂತ್ರ ಸಿದ್ಧಪಡಿಸಿ ರಾಜ್ಯದ ನಿಲುವು ಸ್ಪಷ್ಟಪಡಿಸಿದರೆ, ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾ ಧಿಕಾರ ಹಾಗೂ ಸುಪ್ರೀಂಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸಿ ನ್ಯಾಯ ಪಡೆಯಬೇಕಾಗಿದೆ. ಹಾಗೊಮ್ಮೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಮಾಡಿದರೆ ಕೇಂದ್ರದ ಮೇಲೆ ನಾವೆಲ್ಲರೂ ಸೇರಿ ಒತ್ತಡ ಹಾಕಿ ಸಂಕಷ್ಟ ಸೂತ್ರ ರೂಪಿಸಲು ಒತ್ತಡ ಹಾಕುತ್ತೇವೆ ಎಂದರು.

ಪ್ರಧಾನಿಯವರಿಗೆ ಈ ಹಿಂದೆ ಎಲ್ಲ ರೀತಿಯ ಅಧಿ ಕಾರ ಇತ್ತು. ಆದರೆ ಪ್ರಾಧಿಕಾರ ರಚನೆಯಾದ ನಂತರ ಅವರು ನೀರು ಬಿಡಿ, ಬಿಡಬೇಡಿ ಎಂದು ಆದೇಶ ಮಾಡುವ ಅಧಿ ಕಾರ ಇಲ್ಲ. ಹಾಗಾಗಿ ಪ್ರಾ ಧಿಕಾರ ಮತ್ತು ನ್ಯಾಯಾಲಯದಲ್ಲಿ ಕರ್ನಾಟಕದ ವಾಸ್ತವಾಂಶ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಇವತ್ತಿನ ಪ್ರಸ್ತಾವನೆ ಅಲ್ಲ. ಅದು ದಶಕಗಳಿಂದಲೂ ಒತ್ತಡ ಇದ್ದು, ತಮಿಳುನಾಡು ವಿರೋ ಧಿಸುತ್ತಾ ಬಂದಿದೆ. ಆದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡಿಪಿಆರ್‌ಗೆ ಒಪ್ಪಿಗೆ ಸೂಚಿಸಿದೆ. ಯೋಜನೆ ಜಾರಿ ಸುಲಭವಲ್ಲ. ಆದರೂ ರಾಜ್ಯದ ಹಿತದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಿ ಮೇಕೆದಾಟು ಯೋಜನೆಗೆ ಬೆಂಬಲ ನೀಡುತ್ತೇವೆ ಎಂದರು.

Advertisement

ಮಾಜಿ ಸಚಿವ ಆರ್‌.ಅಶೋಕ್‌, ಶಾಸಕ ರವಿಸುಬ್ರಮಣ್ಯ, ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್‌, ಚೇತನ್‌ಗೌಡ, ಅಶೋಕ್‌ಜಯರಾಂ ಸೇರಿದಂತೆ ಮತ್ತಿತರರಿದ್ದರು.

ನೀರು ಬಿಟ್ಟು ಲೀಕೇಜ್‌ ನೀರು ಅಂತಾರೆ: ಅಶೋಕ್‌
ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟು ಲೀಕೇಜ್‌ ನೀರು ಹೋಗುತ್ತಿದೆ ಎಂದು ಹೇಳುತ್ತಿದೆ ಎಂದು ಮಾಜಿ ಸಚಿವ ಆರ್‌.ಅಶೋಕ್‌ ಕಿಡಿಕಾರಿದರು. ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾವೇರಿ ಉಳಿವಿಗಾಗಿ ರೈತರ ಹೋರಾಟ ನಿರಂತರವಾಗಿ ನಡೆಯುತ್ತಿದೆ. ಕಾವೇರಿ ನೀರು ಬಳಸುವುದು ಬೆಂಗಳೂರಿಗರೇ ಹೆಚ್ಚು. ಒಂದು ದಿನ ನೀರು ಹೆಚ್ಚು ಕಮ್ಮಿ ಆದರೆ 50 ಕರೆಗಳು ಬರುತ್ತವೆ. ಮಂಡ್ಯ ಜನರು ವಿರೋಧ ಮಾಡದೇ ಇದ್ದಿದ್ದರೆ ಇನ್ನೂ ಅದೆಷ್ಟು ನೀರು ಹೋಗುತ್ತಿತ್ತೋ, ರೈತರ ಹೋರಾಟಕ್ಕೆ ಹೆದರಿ ಕದ್ದು ಮುಚ್ಚಿ ನೀರು ಬಿಡುತ್ತಿದ್ದಾರೆ ಎಂದು ದೂರಿದರು. ಬೆಂಗಳೂರಿನವರು ಕಾವೇರಿ ಹೋರಾಟಕ್ಕೆ ಬರಬೇಕು. ಕುಡಿಯುವ ನೀರು ಇಲ್ಲ ಎಂದರೆ ಸಾಫ್ಟ್‌ವೇರ್‌, ಹಾರ್ಡ್‌ವೇರ್‌ ಕೆಲಸಕ್ಕೆ ಬರಲ್ಲ. ಜನವರಿ ನಂತರ ಇದೆ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿಗೂ ತೊಂದರೆಯಾಗಲಿದೆ. ಕೆಆರ್‌ಎಸ್‌ ಇಲ್ಲದಿದ್ದರೆ ಬೆಂಗಳೂರು ಜನ ಬದುಕಲು ಸಾಧ್ಯವಿಲ್ಲ. ಮಂಡ್ಯ ರೈತರ ಹೋರಾಟಕ್ಕೆ ಬೆಂಗಳೂರಿಗರೂ ಸಾಥ್‌ ಕೊಡಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next