Advertisement

ಚಿಗರಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ ನಿರೀಕ್ಷೆ

09:14 AM Jun 07, 2020 | Suhan S |

ಹುಬ್ಬಳ್ಳಿ: ಲಾಕ್‌ಡೌನ್‌ ಕಾರಣದಿಂದಾಗಿ ಸ್ಥಗಿತಗೊಂಡು ಶುಕ್ರವಾರದಿಂದ ಆರಂಭಗೊಂಡಿರುವ ಬಿಆರ್‌ಟಿಎಸ್‌ ಚಿಗರಿ ಬಸ್‌ ಸೇವೆಗೆ ನಿರೀಕ್ಷಿತ ಸ್ಪಂದನೆ ಪ್ರಯಾಣಿಕರಿಂದ ದೊರೆತಿಲ್ಲವಾದರೂ, ಸೋಮವಾರದಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಸುಧಾರಣೆಯಾಗುವ ನಿರೀಕ್ಷೆ ಸಂಸ್ಥೆಯದ್ದಾಗಿದೆ. ಜೂ. 1ರಿಂದ ಬಸ್‌ ಸೇವೆ ಆರಂಭಗೊಂಡ ನಂತರ ಅವಳಿನಗರದ ಮಧ್ಯೆ ಸಿಟಿ ಬಸ್‌ಗಳ ಸೇವೆ ಒದಗಿಸಲಾಗುತ್ತಿದೆ. ಮೂರು ದಿನಗಳಿಂದ ಬೇಂದ್ರೆ ಬಸ್‌ಗಳ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ.

Advertisement

ಜೂ. 5ರಿಂದ ಬಿಆರ್‌ಟಿಎಸ್‌ ಬಸ್‌ಗಳ ಸಂಚಾರ ಕೂಡ ಆರಂಭಗೊಂಡಿದೆ. ಕೋವಿಡ್ ಸೋಂಕು ಹರಡುವ ಸಾಧ್ಯತೆಯಿಂದಾಗಿ ಸಾಮಾಜಿಕ ಅಂತರ ಕಾಪಾಡುವುದಕ್ಕಾಗಿ ಇಬ್ಬರು ಕೂಡುವ ಆಸನದಲ್ಲಿ ಒಬ್ಬ ವ್ಯಕ್ತಿ ಮಾತ್ರ ಕೂಡಲು ಅವಕಾಶ ನೀಡಿದ್ದರೂ ಸಂಚಾರ ದಟ್ಟಣೆಯಿಂದಾಗಿ  ಪ್ರತಿ ಆಸನದಲ್ಲಿಯೂ ಕುಳಿತು ಪ್ರಯಾಣಿಸುತ್ತಿದ್ದರು. ದಿನದಿಂದ ದಿನಕ್ಕೆ ಬಸ್‌ನಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಚಿಗರಿ ಬಸ್‌ಗಳು ಕೂಡ ಸೇವೆ ಆರಂಭಿಸಿರುವುದು ಜನರಿಗೆ ಅನುಕೂಲವಾಗಿದೆ.

ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಹುಬ್ಬಳ್ಳಿ-ಧಾರವಾಡ ಮಧ್ಯೆ ಒಟ್ಟು 40 ಹವಾನಿಯಂತ್ರಿತ ಬಸ್‌ ಗಳ ಸೇವೆ ಒದಗಿಸಲಾಗುತ್ತಿದೆ. ಕಳೆದೆರಡು ದಿನಗಳಿಂದ ಪ್ರಯಾಣಿಕರ ಪ್ರತಿಕ್ರಿಯೆ ತೃಪ್ತಿಕರವಾಗಿಲ್ಲ. ಆದರೆ ಸೋಮವಾರದಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳಗೊಳ್ಳುವ ನಿರೀಕ್ಷೆಯಿದೆ ಎಂದು ಬಿಆರ್‌ಟಿಎಸ್‌ ವಿಶೇಷ ಅಧಿಕಾರಿ ವಿಶ್ವಜ್ಞ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next