Advertisement

ಕೇಂದ್ರದ ಸಂಪುಟದಲ್ಲಿ ಹೆಚ್ಚಿನ ಸ್ಥಾನ ನಿರೀಕ್ಷೆ: ಸಚಿವ ಶೆಟ್ಟರ್

12:33 PM Jul 07, 2021 | Team Udayavani |

ಕಲಬುರಗಿ: ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ರಾಜ್ಯಕ್ಕೆ ಹೆಚ್ಚಿನ ಸ್ಥಾನ ಸಿಗುವ ಸಿಗಲಿದೆ. ಇಬ್ಬರು ಇಲ್ಲವೇ ಮೂವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು

Advertisement

ಸುದ್ದಿಗಾರರೊಂದಿಗೆ ಮಾತನಾಡಿರ ಅವರು, ಸಚಿವ ಸ್ಥಾನದಿಂದ ಡಿ.ವಿ.ಸದಾನಂದ ಗೌಡ ಅವರನ್ನು ಕೈ ಬಿಡುವ ಮಾಹಿತಿ ಇಲ್ಲ. ಕೇವಲ ಮಾಧ್ಯಮಗಳಲ್ಲಿ ಮಾತ್ರ ಇದು ಕೇಳಿಬರುತ್ತಿದೆ ಎಂದರು.

ಇದನ್ನೂ ಓದಿ: ಆಡಿಯೋ ಅಲ್ಲ ಬೇಕಾದರೆ ಮಿಸೈಲ್ ನ್ನೇ ಹೊರ ಬಿಡಲಿ, ಹೆಚ್ ಡಿಕೆ ವಿರುದ್ಧ ಸುಮಲತಾ ವಾಗ್ದಾಳಿ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಈಗ ಆ ಹುದ್ದೆ ಖಾಲಿ ಇಲ್ಲ. ಇಂತಹ ಸಂದರ್ಭಗಳಲ್ಲಿ ಈ ಬಗ್ಗೆ ಮಾತನಾಡುವುದೂ ಕೂಡ ಅರ್ಥವಿಲ್ಲ. ಹೈಕಮಾಂಡ್ ಮಟ್ಟದಲ್ಲೂ ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚೆಗೆ  ಬಂದಿಲ್ಲ. ನನ್ನ ಮೂಲಗಳ ನಾಯಕತ್ವ ಬದಲಾವಣೆ ವಿಷಯ ಎಲ್ಲೂ ಇಲ್ಲ ಎಂದು ಹೇಳಿದರು.

ನಾಯಕತ್ವ ಬದಲಾವಣೆ ಬಗ್ಗೆ ಅನವಶ್ಯಕವಾಗಿ ಚರ್ಚೆ ಮಾಡಲಾಗುತ್ತಿದೆ. ಇದರಿಂದ ಆಡಳಿತಕ್ಕೂ ಧಕ್ಕೆ ಉಂಟಾಗುತ್ತದೆ.‌ ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ನನ್ನ ಇಲಾಖೆಯಲ್ಲಿ ಯಾರು ಕೂಡ ಹಸ್ತಕ್ಷೇಪ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next