Advertisement
ಜೆಪಿ ಭವನದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಸಭೆ ಸಂಧರ್ಭ ಮಾತನಾಡಿದ ಹೆಚ್ ಡಿಕೆ, ನಿನ್ನೆ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ನೋಡಿದ್ದೇನೆ, ಶಿವರಾಮೇಗೌಡರ ದೂರವಾಣಿ ರೆಕಾರ್ಡ್ ವೈರಲ್ ಆಗಿದೆ. ಸಂಬಂಧ ಇಲ್ಲದೇ ಇರುವ ವಿಚಾರವನ್ನ ಪ್ರಸ್ತಾಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿ ದಿ.ಮಾದೇಗೌಡರ ಬಗ್ಗೆ ಮಾತನ್ನಾಡಿದ್ದಾರೆ. ಮಾದೇಗೌಡರು ಈಗ ಇಲ್ಲ. ಆದರೆ ಅವರ ಹೆಸರು ಯಾಕೆ ಎಳೆದು ತಂದರೋ ಗೊತ್ತಿಲ್ಲ. ಅವರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಈ ಸಂಬಂಧ ನಮ್ಮ ಅಧ್ಯಕ್ಷರಿಗೆ ಸೂಚನೆ ಕೊಡುತ್ತೇನೆ. ನೋಟೀಸ್ ಕೊಟ್ಟು ಪಕ್ಷದಿಂದ ಹೊರ ಹಾಕಿ ಅಂತ ಸೂಚಿಸುತ್ತೇನೆ. ಅಂತವರು ಪಕ್ಷದಲ್ಲಿ ಇದ್ದರೆ ಶೋಭೆ ಇರುವುದಿಲ್ಲ ಎಂದು ಕಿಡಿ ಕಾರಿದ್ದಾರೆ.
Related Articles
Advertisement
ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪುರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಾಸೀರ್ ಹುಸೇನ್ ಉಸ್ತಾದ್, ಮಾಜಿ ಸಚಿವ ನಬೀ ಹಾಗೂ ಜಿಲ್ಲಾ, ತಾಲ್ಲೂಕು ಘಟಕಗಳ ಸಮುದಾಯದ ನಾಯಕರು ಉಪಸ್ಥಿತರಿದ್ದರು. ಪರಿಷತ್ ಸದಸ್ಯ ಬಿ.ಎಂ ಫಾರೂಕ್, ಮತ್ತು ಜಫ್ರುಲ್ಲಾ ಖಾನ್ ಗೈರಾಗಿದ್ದರು.