Advertisement

ದ್ವಿತೀಯ ಪಿಯುಸಿ ವಿದ್ಯಾರ್ಥಿ ಗುಂಡೇಟಿಗೆ ಪ್ರಾಂಶುಪಾಲರು ಬಲಿ!

05:53 PM Jan 20, 2018 | Team Udayavani |

ಹರ್ಯಾಣ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಾಂಶುಪಾಲರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಹರ್ಯಾಣದ ಯಮುನಾನಗರದಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪ್ರಿನ್ಸಿಪಾಲ್ ರಿತು ಛಾಬ್ರಾ ಎಂಬವರ ಮೇಲೆ ವಿದ್ಯಾರ್ಥಿ ಏಕಾಏಕಿ ನಾಲ್ಕು ಗುಂಡಿನ ಮಳೆಗರೆದಿದ್ದ. ಕಚೇರಿಯಲ್ಲಿ ಕುಸಿದು ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ದೇಶ್ ರಾಜ್ ತಿಳಿಸಿದ್ದಾರೆ.

ಅಶಿಸ್ತಿನಿಂದ ವರ್ತಿಸಿದ್ದ ವಿದ್ಯಾರ್ಥಿಯನ್ನು ಕಾಲೇಜಿನಿಂದ ಅಮಾನತುಗೊಳಿಸಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ವಿದ್ಯಾರ್ಥಿ ಪ್ರಾಂಶುಪಾಲರ ಮೇಲೆ ಗುಂಡಿನ ದಾಳಿ ನಡೆಸಿದ್ದು. ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next