Advertisement

Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

01:11 PM May 24, 2024 | Team Udayavani |

ದಾವಣಗೆರೆ: ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ಬಹು ದೊಡ್ಡ ಆಶ್ಚರ್ಯದ ವಿಷಯ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸದಸ್ಯತ್ವವನ್ನೇ ಹೊಂದಿಲ್ಲ. ಆದರೂ, ಉಚ್ಚಾಟನೆ ಮಾಡಲಾಗಿದೆ ಎಂಬ ವಿಷಯ ಕೇಳಿ ನಿಜಕ್ಕೂ ಆಶ್ಚರ್ಯ ತಂದಿದೆ ಎಂದರು.

ನನಗೆ ನಾಲ್ಕಾಣೆಯ ಕಾಂಗ್ರೆಸ್ ಸದಸ್ಯತ್ವ ಬೇಕಾಗಿಯೇ ಇಲ್ಲ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸಂಘಟನೆ, ಪ್ರಜಾಸತ್ತಾತ್ಮಕ ಮೌಲ್ಯದೊಂದಿಗೆ ಸಂವಿಧಾನದಡಿ ಪರಿಣಾಮಕಾರಿಯಾಗಿ ಹೋರಾಟ ನಡೆಸುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next